ಬಾಂಗ್ಲಾದೇಶಕ್ಕೆ ಭೇಟಿ ನೀಡಲಿರುವ ಪರಿಕ್ಕರ್

Published : Nov 29, 2016, 11:15 AM ISTUpdated : Apr 11, 2018, 12:42 PM IST
ಬಾಂಗ್ಲಾದೇಶಕ್ಕೆ ಭೇಟಿ ನೀಡಲಿರುವ ಪರಿಕ್ಕರ್

ಸಾರಾಂಶ

ಈ ಮೂಲಕ ಪರಿಕ್ಕರ್ ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿರುವ ಭಾರತದ ಮೊದಲ ರಕ್ಷಣಾ ಮಂತ್ರಿ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.

ನವದೆಹಲಿ(ನ.29): ಉಭಯ ರಾಷ್ಟ್ರಗಳ ರಕ್ಷಣಾ ಭಾಂದವ್ಯ ಹೆಚ್ಚಿಸುವ ಸಲುವಾಗಿ ಭಾರತದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ನಾಳೆಯಿಂದ ಎರಡು ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಮೂಲಕ ಪರಿಕ್ಕರ್ ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿರುವ ಭಾರತದ ಮೊದಲ ರಕ್ಷಣಾ ಮಂತ್ರಿ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ. ಬುಧವಾರ ಬಾಂಗ್ಲಾದೇಶ ರಾಷ್ಟ್ರಪತಿ ಅಬ್ದುಲ್ ಹಮೀದ್ ಅವರನ್ನು ರಾಷ್ಟ್ರ ರಾಜಧಾನಿ ಢಾಕಾದಲ್ಲಿ ಬೇಟಿಯಾಗಲಿದ್ದಾರೆ.

ರಕ್ಷಣಾ ಸಚಿವರು ಈ ಮೊದಲೇ ಭಾಂಗ್ಲಾದೇಶಕ್ಕೆ ಭೇಟಿ ನೀಡಬೇಕಿತ್ತು ಆದರೆ ಕಾರಣಾಂತರಗಳಿಂದ ಭೇಟಿಯನ್ನು ಮುಂದೂಡಲಾಗಿತ್ತು ಎಂದು ರಕ್ಷಣಾ ಸಚಿವಾಲಯದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಉಭಯ ದೇಶಗಳ ನಡುವೆ ರಕ್ಷಣಾ-ಭಾಂದವ್ಯ ಬಲಪಡಿಸುವುದು ಹಾಗೂ ಬಾಂಗ್ಲಾ ಮೇಲೆ ಚೀನಾ ಪ್ರಾಬಲ್ಯ ತಗ್ಗಿಸುವುದು ಪರಿಕ್ಕರ್ ಭೇಟಿಯ ಮುಖ್ಯ ಉದ್ದೇಶ ಎಂದು ಉನ್ನತ ಮೂಲಗಳು ತಿಳಿಸಿವೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಿವಮೊಗ್ಗ-ಬೆಂಗಳೂರು & ಶಿವಮೊಗ್ಗ-ಚಿಕ್ಕಮಗಳೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯ
‘ಕೋಕಾ’ ಸೇರಿಸದಿದ್ದರೆ ಈ ಬಿಲ್‌ ಹಲ್ಲಿಲ್ಲದ ಹಾವು: ಹೈಕೋರ್ಟ್‌ ವಕೀಲ ಎಸ್‌.ಬಾಲನ್‌ ಲೇಖನ