
ಬೆಂಗಳೂರು[ಆ.21]: ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರ ಕೈಗೆ ಮತ್ತು ಪಕ್ಷದ ಸಂಘಟನೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ತೆಕ್ಕೆಗೆ ಹೋದಂತಾಗಿದೆ.
ಮುಖ್ಯಮಂತ್ರಿಯನ್ನಾಗಿ ಯಡಿಯೂರಪ್ಪ ರನ್ನು ನೇಮಕ ಮಾಡುವ ಮೊದಲೇ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿತ್ತು. ನಿಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ. ರಾಜ್ಯಾಧ್ಯಕ್ಷರನ್ನು ನಮಗೆ ಬೇಕಾದವರನ್ನು ಮಾಡುತ್ತೇವೆ ಎಂಬ ಮಾತನ್ನು ವರಿಷ್ಠರು ಬಿಎಸ್ವೈ ಗಮನಕ್ಕೆ ತಂದಿದ್ದರು ಎನ್ನಲಾಗಿದೆ
ಆದರೂ ಯಡಿಯೂರಪ್ಪ ಅವರು ಅರವಿಂದ್ ಲಿಂಬಾವಳಿ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಪ್ರಸ್ತಾಪ ಮಾಡಿದ್ದರು. ಸಂಸದರೇ ಆಗಬೇಕಾದಲ್ಲಿ ಶೋಭಾ ಕರಂದ್ಲಾಜೆ ಅಥವಾ ಪಿ.ಸಿ.ಮೋಹನ್ ಪೈಕಿ ಒಬ್ಬರನ್ನು ಪರಿಗಣಿಸಿ ಎಂಬ ಸಲಹೆಯನ್ನೂ ನೀಡಿದ್ದರು. ಆದರೆ, ಪಕ್ಷದ ಹೈಕಮಾಂಡ್ ಈ ವಿಷಯದಲ್ಲಿ ಹಿಂದೆ ಸರಿಯಲಿಲ್ಲ. ಸಂಪುಟ ರಚನೆ ವೇಳೆ ಯಡಿಯೂರಪ್ಪ ಅವರು ಮುಂದಿಟ್ಟ ಕೆಲವು ಆಪ್ತ ಶಾಸಕರನ್ನು ಸಚಿವರನ್ನಾಗಿಸಲು ಸಹಮತ ಸೂಚಿಸಿದ ಬೆನ್ನಲ್ಲೇ ವರಿಷ್ಠರು ರಾಜ್ಯಾಧ್ಯಕ್ಷ ಹುದ್ದೆಗೆ ನಳಿನ್ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದರು. ಕಟೀಲ್ ಅವರು ಸಂತೋಷ್ ಅವರ ಅತ್ಯಾಪ್ತರು ಎನ್ನುವುದು ಜಗಜ್ಜಾಹೀರಾಗಿರುವ ಸಂಗತಿ. ಈ ಮೂಲಕ ಇದೀಗ ಪಕ್ಷ ಸಂತೋಷ್ ಅವರ ತೆಕ್ಕೆಗೆ ಬಂದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.