
ಚೆನ್ನೈ(ಸೆ.15): ಕಳೆದ ಜುಲೈನಲ್ಲಿ ವಾಯುಪಡೆಗೆ ಸೇರಿದ AN-32 ವಿಮಾನ ನಾಪತ್ತೆಯಾದ ವಿಮಾನದಲ್ಲಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಸೇನೆ ದೃಢಪಡಿಸಿದೆ.
ತಮಿಳುನಾಡಿನ ತಾಂಬರಮ್ ಏರ್ಬೇಸ್ನಿಂದ ಜು.22ರಂದು ಅಂಡಮಾನ್ ನಿಕೋಬರ್ನ ಪೋರ್ಟ್ಬ್ಲೇರ್ಗೆ ತೆರಳುತ್ತಿದ್ದಾಗ ವಿಮಾನ ನಾಪತ್ತೆಯಾಗಿತ್ತು. ಈ ಕುರಿತಂತೆ ತನಿಖೆ ನಡೆಸಿದ ಅಧಿಕಾರಿಗಳು ವಾಯುಪಡೆ ವಿಮಾನ ಪತನಗೊಂಡಿರುವುದು ದೃಢಪಡಿಸಿದ್ದಾರೆ. ಈ ಸಂಬಂಧ ವಾಯುಪಡೆ ಮೃತರ ಕುಟುಂಬಗಳಿಗೆ ಪತ್ರದ ಮೂಲಕ ಮಾಹಿತಿ ರವಾನಿಸಿದೆ.
ಪತನದ ವೇಳೆ ವಿಮಾನದಲ್ಲಿದ್ದ ಎಲ್ಲಾ 29 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಎಎಫ್ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಇಲ್ಲಿಯವರೆಗೂ ಯಾವುದೇ ಅವಶೇಷಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು ಭಾರತೀಯ ನೌಕಪಡೆ, ಕರಾವಳಿ ಪಡೆ ಜಂಟಿಯಾಗಿ ಪತ್ತೆಕಾರ್ಯವನ್ನು ಮುಂದುವರೆಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.