
ನವದೆಹಲಿ (ಸೆ.13): ಅಸ್ಸಾಮಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಪತಂಜಲಿ ಸಂಸ್ಥೆ ವಾಯ್ದೆ ಮುಗಿದು ಹೋದ ಉತ್ಪನ್ನಗಳನ್ನು ಪೂರೈಸಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ.
ಪತಂಜಲಿ ಸಂಸ್ಥೆ ವಾಯ್ದೆ ಮುಗಿದು ಹೋದ ಹಾಲಿನ ಪುಡಿ, ಜ್ಯೂಸ್ ಪ್ಯಾಕೇಟ್’ಗಳನ್ನು ಪೂರೈಸಿದೆ ಎಂದು ಅಲ್ಲಿನ ಸ್ಥಳೀಯ ಚಾನಲೊಂದು ಪ್ರಸಾರ ,ಮಾಡಿದೆ.
ಈ ಬಗ್ಗೆ ಪತಂಜಲಿ ಕಂಪನಿಯನ್ನು ಸಂಪರ್ಕಿಸಿದಾಗ, ಪತಂಜಲಿ ಈ ಆರೋಪವನ್ನು ತಳ್ಳಿ ಹಾಕಿದ್ದು, ಸಾಗಾಣಿಕೆ ಮತ್ತು ಪೂರೈಕೆಯಲ್ಲಿ ನವು ಯಾವಾಗಲೂ ಜಾಗ್ರತೆ ವಹಿಸುತ್ತೇವೆ. ನಮ್ಮ ಪ್ರತಿನಿಧಿಗಳಲ್ಲದೇ ಬೇರೆ ಯಾರಾದರೂ ವಾಯ್ದೆ ಮುಗಿದು ಹೋದ ಉತ್ಪನ್ನಗಳನ್ನು ನೀಡಿದರೆ ಅದಕ್ಕೆ ನಾವು ಜವಾಬ್ದಾರರಲ್ಲ. ನಾವು ವಾಯ್ದೆ ಮುಗಿದು ಹೋದ ಉತ್ಪನ್ನಗಳನ್ನು ಕಳುಹಿಸಿಲ್ಲ. ಮಾನವೀಯತೆ ದೃಷ್ಟಿಯಿಂದ ಅಸ್ಸಾಮಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ನಾವು ಸಹಾಯ ಮಾಡುತ್ತಿದ್ದೇವೆ ಎಂದು ಪತಂಜಲಿ ಸಂಸ್ಥೆ ಸ್ಪಷ್ಟನೆ ಕೊಟ್ಟಿದೆ.
ಈ ಉತ್ಪನ್ನಗಳ ಸೇವನೆಯಿಂದ ಸಾಕಷ್ಟು ಜನರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎನ್ನಲಾಗಿದೆ. ಆದರೆ ಜಿಲ್ಲಾಡಳಿತ ಇದನ್ನು ನಿರಾಕರಿಸಿದೆ. ಜಿಲ್ಲಾಡಳಿತ ತನಿಖೆ ಕೈಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.