ರಾಜಧಾನಿಯಲ್ಲೇ ಸರ್ಕಾರಿ ಶಾಲೆ ದುಸ್ಥಿತಿ! ಯಾವಾಗ ಬೀಳುತ್ತೋ ಗೊತ್ತಿಲ್ಲ

Published : Jun 14, 2017, 12:13 PM ISTUpdated : Apr 11, 2018, 12:50 PM IST
ರಾಜಧಾನಿಯಲ್ಲೇ ಸರ್ಕಾರಿ ಶಾಲೆ ದುಸ್ಥಿತಿ! ಯಾವಾಗ ಬೀಳುತ್ತೋ ಗೊತ್ತಿಲ್ಲ

ಸಾರಾಂಶ

ಇತ್ತಿಚಿನ ದಿನಗಳಲ್ಲಿ ಹಳ್ಳಿಯ ಬಡ ಜನರೂ ಕೂಡ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಯಾಕೆ ಕಳಿಸುವುದಿಲ್ಲ ಎನ್ನುವ ಪ್ರಶ್ನೆಗೆ ನೂರಾರು ಕಾರಣಗಳು ಸಿಗುತ್ತವೆ. ಇಂತಹದೇ ಒಂದು ಪ್ರಶ್ನೆಗೆ  ಆನೇಕಲ್​ ಶಾಲೆ ಉತ್ತರ ನೀಡುತ್ತೆ.

ಆನೇಕಲ್: ಇತ್ತಿಚಿನ ದಿನಗಳಲ್ಲಿ ಹಳ್ಳಿಯ ಬಡ ಜನರೂ ಕೂಡ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಯಾಕೆ ಕಳಿಸುವುದಿಲ್ಲ ಎನ್ನುವ ಪ್ರಶ್ನೆಗೆ ನೂರಾರು ಕಾರಣಗಳು ಸಿಗುತ್ತವೆ. ಇಂತಹದೇ ಒಂದು ಪ್ರಶ್ನೆಗೆ  ಆನೇಕಲ್​ ಶಾಲೆ ಉತ್ತರ ನೀಡುತ್ತೆ.

ದೊಡ್ಡ ದೊಡ್ಡದಾಗಿ ಬಿರುಕು ಬಿಟ್ಟಿರುವ  ಗೋಡೆಗಳು, ದನದ ಕೊಟ್ಟಿಗೆಯಂತಿರುವ  ಕೊಠಡಿಗಳಲ್ಲಿ  ವಿದ್ಯಾಭ್ಯಾಸ  ನಡೆಸುತ್ತಿರುವ ದೃಶ್ಯ ಕಂಡುಬಂದದ್ದು  ಆನೇಕಲ್​ನ ಹೊನ್ನಕಳಸಾಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿ. ಈ ಹಳ್ಳಿಯಲ್ಲಿರುವ ಮಕ್ಕಳು  ಸರ್ಕಾರಿ ಶಾಲೆಯನ್ನೇ  ಅವಲಂಬಿಸಿದ್ದಾರೆ. 

ಈ ಬಿರುಕು ಬಿಟ್ಟಿರುವ ಗೋಡೆಗಳು ಯಾವಾಗ ಮಕ್ಕಳ ಮೇಲೆ ಬೀಳುತ್ತವೊ ಎಂಬ ಭಯದಿಂದ ಕೆಲವು ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆ ಬಿಡಿಸಿ ಆನೇಕಲ್'ನ ಖಾಸಗಿ ಶಾಲೆಗಳಿಗೆ ಸೇರಿಸಿದ್ದಾರೆ, ಇಲ್ಲಿನ ಅವ್ಯೆಸ್ಥೆಯ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರು ಹೊಸ ಕಟ್ಟಡದ ನಿರ್ಮಾಣಕ್ಕಾಗಲಿ ಕಟ್ಟಡದ ರಿಪೇರಿ ಮಾಡಿಸುವ ಗೋಜಿಗೆ ಹೋಗಿಲ್ಲ,

ವಿದ್ಯೆ ಕಲಿಯುವ ಆಸಕ್ತಿ ಮಕ್ಕಳಿಗಿದ್ದರೂ ಮೂಲ ಭೂತ ಸೌಕರ್ಯಗಳಿಲ್ಲದಿರುವುದು ಮಕ್ಕಳು ಪರದಾಡುವಂತಾಗಿದೆ, ಜೋರಾಗಿ ಮಳೆ ಬಂದರೆ ಮಕ್ಕಳಿಗೆ ರಜೆ ನೀಡಾಬೇಕಾದ ಸ್ಥಿತಿ ಉಂಟಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ