
ಹುಬ್ಬಳ್ಳಿ (ಡಿ.17): ದಂತ ವೈದ್ಯನೊಬ್ಬನ ಯಡವಟ್ಟಿನಿಂದ ವ್ಯಕ್ತಿಯೊಬ್ಬ ಜೀವ ಕಳೆದುಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಕಳೆದ 5 ದಿನಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದ ಗಣೇಶ ಪೇಟೆಯ ನಿವಾಸಿ ಅಬ್ದುಲ್ ಖಾದರ್ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಹಲ್ಲುನೋವಿನಿಂದ ಬಳಲುತ್ತಿದ್ದ ಅಬ್ದುಲ್ ಖಾದರ್, ಚಿಕಿತ್ಸೆಗೆಂದು ರತ್ನ ಡೆಂಟಲ್ ಕ್ಲಿನಿಕ್ಗೆ ಹೋಗಿದ್ದರು. ಆಗ ವೈದ್ಯ ಡಾ. ವೀರೇಶ್, ಮೂರು ಹಲ್ಲುಗಳನ್ನು ಕಿತ್ತಿದ್ದಾರೆ. ಆದ್ರೆ ರಕ್ತಸ್ತ್ರಾವ ಮಾತ್ರ ನಿಂತಿರಲಿಲ್ಲ. ಇದರಿಂದ ಕಂಗಾಲಾದ ಅಬ್ದುಲ್ ಖಾದರ್ ಮತ್ತೆ ಆಸ್ಪತ್ರೆಗೆ ಬಂದಿದ್ದಾರೆ. ರೋಗಿಯ ಗಂಭೀರ ಪರಿಸ್ಥಿತಿ ಅರಿತ ವೈದ್ಯ ವೀರೇಶ್, ರೋಗಿಯ ಬಳಿ ಪತ್ರಕ್ಕೆ ಸಹಿ ಮಾಡಿಸಿಕೊಂಡು, ಕುಟುಂಬಕ್ಕೆ 10 ಸಾವಿರ ಕೊಟ್ಟು ಕಿಮ್ಸ್ ಗೆ ದಾಖಲು ಮಾಡಿ ಹೋಗಿದ್ದಾನೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ್ರೂ ರಕ್ತಸ್ರಾವ ಮಾತ್ರ ನಿಂತಿಲ್ಲ.. ಕಳೆದು 5 ದಿನಗಳ ಜೀವನ್ಮರಣದ ಹೋರಾಟ ನಡೆಸಿದ್ದರೋಗಿ ಕೊನೆಗೂ ಮೃತಪಟ್ಟಿದ್ದಾರೆ.. ಸಾವಿಗೆ ವೈದ್ಯನ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿರುವ ಮೃತನ ಸಂಬಂಧಿಕರು, ಶಹಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.