ತುಂಡಾದ ಕಾಲು ತಲೆದಿಂಬಾಗಿ ಇಟ್ಟರು!

Published : Mar 11, 2018, 09:27 AM ISTUpdated : Apr 11, 2018, 01:04 PM IST
ತುಂಡಾದ ಕಾಲು ತಲೆದಿಂಬಾಗಿ ಇಟ್ಟರು!

ಸಾರಾಂಶ

ಉತ್ತರ ಪ್ರದೇಶದಲ್ಲಿ ವೈದಕೀಯ ನಿರ್ಲಕ್ಷ್ಯದ ಪ್ರಕರಣಗಳು ಮುಂದುವರಿದಿದ್ದು, ಅಪಘಾತವೊಂದರಲ್ಲಿ ತುಂಡಾಗಿದ್ದ ವ್ಯಕ್ತಿಯೊಬ್ಬನ ಕಾಲನ್ನು ತಲೆದಿಂಬಾಗಿ ಬಳಸಿರುವ ಆಘಾತಕಾರಿ ಘಟನೆ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ಲಖನೌ: ಉತ್ತರ ಪ್ರದೇಶದಲ್ಲಿ ವೈದಕೀಯ ನಿರ್ಲಕ್ಷ್ಯದ ಪ್ರಕರಣಗಳು ಮುಂದುವರಿದಿದ್ದು, ಅಪಘಾತವೊಂದರಲ್ಲಿ ತುಂಡಾಗಿದ್ದ ವ್ಯಕ್ತಿಯೊಬ್ಬನ ಕಾಲನ್ನು ತಲೆದಿಂಬಾಗಿ ಬಳಸಿರುವ ಆಘಾತಕಾರಿ ಘಟನೆ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ಮೊರಾನಿಪುರ ಪ್ರದೇಶಲ್ಲಿ 25 ವರ್ಷದ ವ್ಯಕ್ತಿಯೊಬ್ಬ ರಸ್ತೆ ಅಪಘಾತಕ್ಕೀಡಾಗಿ ಆತನ ಕಾಲು ತುಂಡಾಗಿತ್ತು. ಒಂದೂವರೆ ಗಂಟೆಗಳ ಬಳಿಕ ಆತನನ್ನು ಚಿಕಿತ್ಸೆಗಾಗಿ ಝಾನ್ಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆತನಿಗೆ ಕಾಲನ್ನು ಮರು ಜೋಡಿಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದರು. ಬಳಿಕ ಆತನನ್ನು ಸ್ಟೆ್ರಚರ್‌ ಮೇಲೆ ಮಲಗಿಸಿ, ತುಂಡಾದ ಕಾಲಿಗೆ ಬ್ಯಾಂಡೇಜ್‌ ಹಾಕಲಾಗಿತ್ತು.

ಆಘಾತಕಾರಿ ಸಂಗತಿಯೆಂದರೆ, ಆತನಿಗೆ ಪ್ರಜ್ಞೆ ಇರುವಾಗಲೇ ತುಂಡಾಗಿ ರಕ್ತ ಸುರಿಯುತ್ತಿದ್ದ ಕಾಲನ್ನು ತಲೆದಿಂಬನ್ನಾಗಿ ಬಳಸಲಾಗಿದೆ. ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇತರ ರೋಗಿಗಳು, ವೈದ್ಯರು ಹಾಗೂ ಸಿಬ್ಬಂದಿ ಸಮ್ಮುಖದಲ್ಲೇ 2 ಗಂಟೆಗಳ ಕಾಲ ಕಾಲು ತುಂಡಾದ ವ್ಯಕ್ತಿಯನ್ನುಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ. ಸಂತ್ರಸ್ತನ ಕುಟುಂಬದ ಸದಸ್ಯರು ತುಂಡಾದ ಕಾಲನ್ನು ತಲೆಯ ಅಡಿಯಿಂದ ತೆಗೆಯುವಂತೆ ಕೋರಿಕೊಂಡಿದ್ದರೂ ಅದಕ್ಕೆ ಸ್ಪಂದಿಸದೇ ವೈದ್ಯರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಳಿಕ ಆತನನ್ನು ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿ, ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಝಾನ್ಸಿ ಮೆಡಿಕಲ್‌ ಕಾಲೇಜಿನ ವೈದ್ಯಕೀಯ ನಿರ್ಲಕ್ಷ್ಯಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?