ಬೀದರ್ (ಸೆ.27): ಬೀದರ್ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬೆಳೆ ಹಾನಿಯಾದ ರೈತರಿಗೆ ತಕ್ಷಣವೇ ಪರಿಹಾರ ಕೊಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೀದರ್ ಜಿಲ್ಲೆಯಾದ್ಯಂತ ಸುರಿದ ಭೀಕರ ಮಳೆಯಿಂದಾಗಿ ನೆರೆ ಉಂಟಾಗಿತ್ತು.
ಈ ವೇಳೆ ಜಿಲ್ಲೆಯಲ್ಲಾದ ಹಾನಿಯ ಪರಿಹಾರ ನೀಡುವಂತೆ ಸರ್ಕಾರಕ್ಕೆ ಎರಡು ಸಾವಿರ ಕೋಟಿಯ ನಷ್ಟದ ಮಾಹಿತಿ ನೀಡಲಾಗಿದೆ. ಸಿಎಂ ವೈಮಾನಿಕ ಸಮೀಕ್ಷೆಯಿಂದ ಸಮಸ್ಯೆ ಪರಿಹಾರ ಆಗಲ್ಲ. ಇದರಿಂದ ಸಂಕಷ್ಟಕ್ಕೊಳಗಾದವರ ನೋವು ಸಿಎಂಗೆ ಅರ್ಥವಾಗಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.
ಬೀದರ್ ಜಿಲ್ಲೆ ಯಲ್ಲಿ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಬೆಳೆ ಹಾನಿಯಾದ ರೈತರಿಗೆ ತಕ್ಷಣವೇ ಪರಿಹಾರ ಕೊಡಬೇಕು ಎಂದು ಶೆಟ್ಟರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.