ಉ.ಪ್ರ. ಸಿಎಂ ಅಖಿಲೇಶ್ ಮನೆಗೆ ಸೈಕಲ್ ರಿಕ್ಷಾದಲ್ಲಿ ಆಗಮಿಸಿದ ಪೇಟಿಎಂ ಸಿಇಒ

Published : Oct 29, 2016, 02:47 AM ISTUpdated : Apr 11, 2018, 12:56 PM IST
ಉ.ಪ್ರ. ಸಿಎಂ ಅಖಿಲೇಶ್ ಮನೆಗೆ ಸೈಕಲ್ ರಿಕ್ಷಾದಲ್ಲಿ ಆಗಮಿಸಿದ ಪೇಟಿಎಂ ಸಿಇಒ

ಸಾರಾಂಶ

ಸೈಕಲ್‌'ನಲ್ಲಿ ಬಂದ ಶರ್ಮಾರ ಬಗ್ಗೆ ಅಖಿಲೇಶ್‌ ಸಂತಸ ವ್ಯಕ್ತಪಡಿಸಿದ್ದಾರೆ. ರಿಕ್ಷಾ ಚಾಲಕನಿಗೆ ದೀಪಾವಳಿ ಕೊಡುಗೆಯಾಗಿ 6 ಸಾವಿರ ರೂ. ನೀಡಿ​ದ್ದಾರೆ.

ಲಖನೌ: ಸಾಮಾನ್ಯವಾಗಿ ಕಂಪನಿಗಳ ಮುಖ್ಯಸ್ಥರು ಅಥವಾ ಶ್ರೀಮಂತರೆಂದರೆ ಐಶಾರಾಮಿ ಕಾರುಗಳಲ್ಲೇ ಓಡಾಡುತ್ತಾರೆ ಎಂಬ ಕಲ್ಪನೆ ನಮ್ಮದು, ಅದು ಸತ್ಯವೂ ಹೌದು. ಆದರೆ, ಪ್ರಮುಖ ಅಂತರ್ಜಾಲ ಮಾರಾಟ ಸಂಸ್ಥೆ ‘ಪೇಟಿಎಂ' ಮುಖ್ಯಸ್ಥ ವಿಜಯ್‌ ಶೇಖರ್‌ ಅವ​ರು ಉತ್ತರಪ್ರದೇಶ ಸಿಎಂ ಅಖಿಲೇಶ್‌ ಯಾದವ್‌ರನ್ನು ಭೇಟಿ ಮಾಡಲು ಸೈಕಲ್‌ ರಿಕ್ಷಾದಲ್ಲಿ ಬಂದಿದ್ದಾರೆ. 

‘ಯಶ್‌ ಭಾರ್ತಿ' ಪ್ರಶಸ್ತಿ ಸ್ವೀಕರಿಸಲು ಲಖನೌಗೆ ಬಂದಿದ್ದ ಶರ್ಮಾ ಅವರು ಅಖಿ​ಲೇಶ್‌'ರನ್ನು ಭೇಟಿ ಮಾಡಲು ಹೊರಟಿದ್ದರು. ಅರ್ಧ​ದ​ಲ್ಲೇ ಲಖನೌನ ಸಂಚಾರದಟ್ಟಣೆಯಲ್ಲಿ ​ಅ​ವರ ಕಾರು ಸಿಲುಕಿಕೊಂಡಿ​ತು. ಕೂಡಲೇ ಅವರು ಕಾರಿ​ನಿಂದ ಇಳಿದು, ಅಲ್ಲೇ ಇದ್ದ ಸೈಕಲ್‌ ರಿಕ್ಷಾ​ವನ್ನು ಏರಿ​ದರು.
ಕಾಳಿದಾಸ ಮಾರ್ಗದಲ್ಲಿರುವ ಅಖಿಲೇಶ್‌ ಅವರ ನಿವಾಸಕ್ಕೆ ಬಂದೊಡನೆ, ಶರ್ಮಾ ಹಾ​ಗೂ ರಿಕ್ಷಾ ಚಾಲಕನನ್ನು ಸಂಪೂರ್ಣ ಭದ್ರತಾ ಪರೀಕ್ಷೆ ನಡೆಸಿ ಪ್ರವೇಶ ನೀಡಲಾ​ಯಿ​ತು.

ಸೈಕಲ್‌'ನಲ್ಲಿ ಬಂದ ಶರ್ಮಾರ ಬಗ್ಗೆ ಅಖಿಲೇಶ್‌ ಸಂತಸ ವ್ಯಕ್ತಪಡಿಸಿದ್ದಾರೆ. ರಿಕ್ಷಾ ಚಾಲಕನಿಗೆ ದೀಪಾವಳಿ ಕೊಡುಗೆಯಾಗಿ 6 ಸಾವಿರ ರೂ. ನೀಡಿ​ದ್ದಾರೆ. ಅಷ್ಟೇ ಅಲ್ಲ, ಚಾಲಕನಿಗೆ ಮನೆ, ಇ-​ರಿಕ್ಷಾ ಹಾಗೂ ಆತನ ಪತ್ನಿಗೆ ಸಮಾಜ​ವಾದಿ ಪಿಂಚಣಿ ಯೋಜನೆಯ ಲಾಭ​ವನ್ನು ನೀಡು​ವುದಾಗಿ ಭರವಸೆ ನೀಡಿದ್ದಾರೆ. ಶರ್ಮಾ ಸೈಕಲ್‌ ರಿಕ್ಷಾ​ದಲ್ಲಿ ಬಂದ ಫೋಟೋ​ವನ್ನು ಅಖಿಲೇಶ್‌ ಟ್ಟಿಟ​ರ್‌'​ನಲ್ಲಿ ಅಪ್‌​ಲೋಡ್‌ ಮಾಡಿ​ದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

RSS ಶತಮಾನೋತ್ಸವದ ಸಂಚಲನ: ಸಂಘಟನಾ ರಚನೆಯಲ್ಲಿ ಅಮೂಲಾಗ್ರ ಬದಲಾವಣೆ? ಇತಿಹಾಸ ಸೇರಲಿದ್ದಾರೆ ಪ್ರಾಂತೀಯ ಪ್ರಚಾರಕರು?
ಕುಡಿದು ತೂರಾಡಿದ ಯುವತಿಯನ್ನು ಸುರಕ್ಷಿತವಾಗಿ ಮನೆ ತಲುಪಿಸಿದ ಕ್ಯಾಬ್ ಚಾಲಕನಿಗೆ ಭಾರಿ ಮೆಚ್ಚುಗೆ