
ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ.
ಧ್ವನಿಯಿಲ್ಲದವರಿಗೆ ಧ್ವನಿಯಾಗಿದ್ದ ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿದ್ದ ನಿರ್ಭೀತ ಪತ್ರಕರ್ತೆಯ ದ್ವನಿಯನ್ನು ಅಡಗಿಸಲು ಬರ್ಬರವಾಗಿ ಹತ್ಯೆಗೈಯಲಾಗಿದೆ, ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜರಾಜೆಶ್ವರಿ ನಗರದಲ್ಲಿರುವ ಅವರ ನಿವಾಸದ ಮೇಲೆ ಇಂದು ಸಂಜೆ ಸುಮಾರು 6.30ರ ಹೊತ್ತಿಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಅಪರಿಚಿತ ದುಷ್ಕರ್ಮಿಗಳು ಸಂಜೆ ಮನೆ ಬಾಗಿಲನ್ನು ತಟ್ಟಿದ್ದಾರೆನ್ನಲಾಗಿದ್ದು, ಗೌರಿ ಬಾಗಿಲು ತೆರೆದಾಗ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗೌರಿ ತಕ್ಷಣ ಕುಸಿದು ಬಿದ್ದಿದ್ದಾರೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.