
ಕೋಲಾರ(ಮೇ.21): ಅದು ಪೂರ್ವಿಕರ ಕಾಲದಿಂದ ಎರಡು ಮೂರು ಗ್ರಾಮಗಳ ಗೋವುಗಳಿಗೆ, ಸಾಕು ಪ್ರಾಣಿಗಳಿಗೆ ಇರುವುದೊಂದೇ ಗೋಮಾಳ ಜಮೀನು. ಅನಾಧಿ ಕಾಲದಿಂದಲೂ ಉಳಿಸಿಕೊಂಡು ಬಂದ ಗ್ರಾಮಸ್ಥರ ಕಣ್ಣಿಗೆ ಗ್ರಾಮ ಪಂಚಾಯಿತಿ ಪಿಡಿಒ ಮಣ್ಣೇರೆಚಿದ್ದಾನೆ. ಅಕ್ರಮವಾಗಿ ಗೋಮಾಳ ಜಮೀನಲ್ಲಿ ಎರಡುವರೆ ಎಕರೆ ತನ್ನ ಹೆಸರಿಗೆ ಮಾಡಿಕೊಂಡಿದ್ದು ಪ್ರಶ್ನಿಸಿದ ಗ್ರಾಮಸ್ಥರನ್ನು ಜೈಲಿಗೆ ಹಾಕಿಸಿ ದರ್ಪ ಮೆರೆದಿದ್ದಾನೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಹೋಬಳಿಯ ಟಿ.ಕುರುಬರಹಳ್ಳಿ ಸರ್ವೇ ನಂಬರ್ 36ರಲ್ಲಿ 32.21 ಎಕರೆ ಸರ್ಕಾರಿ ಗೋಮಾಳ ಜಮೀನು ಇದೆ. ಆದ್ರೆ ಗ್ರಾಮ ಪಂಚಾಯಿತಿ ಪಿಡಿಓ ಅಧಿಕಾರಿ ತುಳಸಿರಾಮ್ ಶೆಟ್ಟಿ ಅಕ್ರಮವಾಗಿ ತನ್ನ ಹೆಸರಿಗೆ ಎರಡು ಎಕರೆ ಇಪ್ಪತ್ತು ಗುಂಟೆ ಜಮೀನು ಮಂಜೂರು ಮಾಡಿಸಿಕೊಂಡಿದ್ದಾನೆ.
ಸುಮಾರು ಮೂವತ್ತು ನಲವತ್ತು ವರ್ಷಗಳಿಂದ ಗ್ರಾಮಸ್ಥರು ಗೋಮಾಳ ಜಮೀನನ್ನು ಕಾಪಾಡಿಕೊಂಡು ಬಂದಿದ್ದಾರೆ. ಆದ್ರೆ ಗ್ರಾಮ ಪಂಚಾಯತಿ ಪಿಡಿಒ ಏಕಾಏಕಿಯಾಗಿ ಜೆಸಿಬಿ ತಂದು ಗೋಮಾಳದಲ್ಲಿ ಇರುವ ಮರ, ಗಿಡಗಳನ್ನು ತೆಗೆಸಿದ್ದಾನೆ. ಇದನ್ನು ಪ್ರಶ್ನೆ ಮಾಡಿದ ಗ್ರಾಮಸ್ಥರಿಗೆ ನಂಗಲಿ ಪೊಲೀಸರನ್ನು ಕರೆಸಿ ಜೈಲಿಗೆ ಕಳುಹಿಸಿದ್ದಾನೆ. ಪಿಡಿಒ ಹಕ್ಕು ಪತ್ರವನ್ನು ವಜಾ ಮಾಡಿ ಗೋಮಾಳ ಉಳಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಒಟ್ಟಿನಲ್ಲಿ ಹಲವು ವರ್ಷಗಳಿಂದ ಕಾಪಾಡಿಕೊಂಡು ಬಂದಿರುವ ಗೋಮಾಳ ಜಮೀನು ಬಡವರಿಗೆ ಸೇರಬೇಕು. ಅನ್ಯಾಯಕ್ಕೊಳಗಾದ ಟಿ.ಕುರುಬರಹಳ್ಳಿ ಗ್ರಾಮಸ್ಥರಿಗೆ ನ್ಯಾಯ ಸಿಗಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.