ಕಾಶ್ಮೀರದಲ್ಲಿ ಪಿಡಿಪಿ ಮುಖಂಡ ಅಬ್ದುಲ್ ಗನಿ ಹತ್ಯೆ

Published : Apr 24, 2017, 12:43 PM ISTUpdated : Apr 11, 2018, 01:06 PM IST
ಕಾಶ್ಮೀರದಲ್ಲಿ ಪಿಡಿಪಿ ಮುಖಂಡ ಅಬ್ದುಲ್ ಗನಿ ಹತ್ಯೆ

ಸಾರಾಂಶ

ಕಳೆದ 15 ದಿನಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿ ಮುಖಂಡರ ಮೇಲೆ ನಡೆದಿರುವ ದಾಳಿ ಇದು ಮೂರನೆಯದ್ದಾಗಿದೆ. ಪ್ರಧಾನಿ ಮೋದಿ ಜೊತೆ ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಮಾತುಕತೆ ನಡೆಸಿರುವ ಬೆನ್ನಲ್ಲೇ ಈ ಹತ್ಯೆ ಘಟನೆ ನಡೆದಿರುವುದು ಗಮನಾರ್ಹ.

ಶ್ರೀನಗರ(ಏ. 24): ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪಿಡಿಪಿ ಮುಖಂಡ ಅಬ್ದುಲ್ ಗನಿ ದರ್ ಅವರನ್ನು ಉಗ್ರಗಾಮಿಗಳು ಹತ್ಯೆಗೈದಿದ್ದಾರೆ. ಇಂದು ಬೆಳಗ್ಗೆ ಜಿಲ್ಲೆಯ ರೋಹಮೂ ಗ್ರಾಮದಲ್ಲಿ ಅಬ್ದುಲ್ ಗನಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೆಲ ಗಂಟೆಗಳ ಬಳಿಕ ಗನಿ ಕೊನೆಯುಸಿರೆಳೆದಿದ್ದಾರೆ. ಉಗ್ರರ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅಬ್ದುಲ್ ಗನಿ ಅವರನ್ನು ತತ್'ಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆನಂತರ ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಪ್ರಾಣ ಉಳಿಸಿಕೊಳ್ಳಲಾಗಲಿಲ್ಲ.

ಕಳೆದ 15 ದಿನಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿ ಮುಖಂಡರ ಮೇಲೆ ನಡೆದಿರುವ ದಾಳಿ ಇದು ಮೂರನೆಯದ್ದಾಗಿದೆ. ಇಂದು ಬಲಿಯಾದ ಅಬ್ದುಲ್ ಗನಿ ದರ್ ಅವರು ಮೂಲತಃ ಕಾಂಗ್ರೆಸ್ಸಿಗರಾಗಿದ್ದು, 2014ರಲ್ಲಿ ಪಿಡಿಪಿ ಪಕ್ಷ ಸೇರಿಕೊಂಡಿದ್ದರು.

ಪ್ರಧಾನಿ ಮೋದಿ ಜೊತೆ ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಮಾತುಕತೆ ನಡೆಸಿರುವ ಬೆನ್ನಲ್ಲೇ ಈ ಹತ್ಯೆ ಘಟನೆ ನಡೆದಿರುವುದು ಗಮನಾರ್ಹ. ಪ್ರತ್ಯೇಕತಾವಾದಿಗಳೊಂದಿಗೆ ನಿರಂತರ ಸಂಘರ್ಷದಲ್ಲಿ ತೊಡಗುವುದರ ಬದಲು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು ಎಂಬುದು ಮುಫ್ತಿಯವರ ವಾದ. ಆದರೆ, ಮಾತುಕತೆಗೆ ಸರಿಯಾದ ವಾತಾವರಣ ನಿರ್ಮಾಣವಾಗಬೇಕಾದರೆ ಉಗ್ರಗಾಮಿಗಳ ಹಿಂಸಾಚಾರ, ಹಾಗೂ ಸೇನಾ ಕಾರ್ಯಾಚರಣೆ ಎರಡೂ ನಿಲ್ಲಬೇಕು ಎಂಬುದು ಮೆಹಬೂಬಾ ಮುಫ್ತಿ ಅಭಿಪ್ರಾಯವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಲಿಮ್ ಆಗೋಕೆ ಹೋಗಿ ಆರೋಗ್ಯವೇ ಹೋಯ್ತು: 11691 ರೂ ಪಾವತಿಸಿ ತೂಕ ಇಳಿಕೆ ಇಂಜೆಕ್ಷನ್ ಪಡೆದಾಕೆಗೆ ಆಘಾತ
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?