
ನವದೆಹಲಿ(ಅ.28): ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಶಾಂತಿ ಬಯಸುವುದು ಎಂದರೆ ಯುದ್ಧ ಇಲ್ಲ ಎಂದಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಅತ್ಯಂತ ಬಡವರ ಅಭಿವೃದ್ಧಿಯೂ ಸಹ ಶಾಂತಿಯ ಸಂಕೇತವೇ. ವಿಶ್ವದಲ್ಲಿ ಶಾಂತಿಯ ಬಗ್ಗೆ ಚರ್ಚೆ ನಡೆದಾಗಲೆಲ್ಲಾ ಭಾರತದ ಹೆಸರು ಮತ್ತು ಕೊಡುಗೆಗಳನ್ನು ಸುವರ್ಣಾಕ್ಷರಗಳಲ್ಲಿ ಉಲ್ಲೇಖಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಹೇಳಿದ್ದಾರೆ.
ಇದೇ ವೇಳೆ ಮೊದಲ ವಿಶ್ವ ಯುದ್ಧದ ಬಗ್ಗೆಯೂ ಮಾತನಾಡಿರುವ ಪ್ರಧಾನಿ ಮೋದಿ, ವಿಶ್ವಯುದ್ಧ-1 ರಲ್ಲಿ ಭಾರತ ನೇರವಾಗಿ ಭಾಗಿಯಾಗಿರಲಿಲ್ಲವಾದರೂ ಭಾರತದ ಅನೇಕ ಯೋಧರು ಹೋರಾಡಿ ಬಲಿದಾನ ಮಾಡಿದ್ದಾರೆ. ಯುದ್ಧದಲ್ಲಿ ತಾವು ಯಾರಿಗೂ ಕಮ್ಮಿಯಿಲ್ಲ ಎಂಬುದನ್ನು ಭಾರತೀಯ ಯೋಧರು ತೋರಿಸಿಕೊಟ್ಟಿದ್ದಾರೆ ಎಂದು ಪ್ರಧಾನಿ ಮೋದಿ ಹೇಳ್ದಿದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.