ಶಾಂತಿ ಎಂದರೆ ಯುದ್ಧ ಇಲ್ಲ ಅಂತಲ್ಲ: ಮೋದಿ ಗುಡುಗು!

Published : Oct 28, 2018, 07:26 PM IST
ಶಾಂತಿ ಎಂದರೆ ಯುದ್ಧ ಇಲ್ಲ ಅಂತಲ್ಲ: ಮೋದಿ ಗುಡುಗು!

ಸಾರಾಂಶ

ಶಾಂತಿ ಎಂದರೆ ಯುದ್ಧ ಮಾಡಲ್ಲ ಅಂತಲ್ಲ ಎಂದ ಮೋದಿ! ಭಯೋತ್ಪಾದನೆ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯ ಇದೆ ಎಂದ ಪ್ರಧಾನಿ! ‘ಅತ್ಯಂತ ಬಡವರ ಅಭಿವೃದ್ಧಿಯೂ ಸಹ ಶಾಂತಿಯ ಸಂಕೇತವೇ’! ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿಮತ! ‘ಮೊದಲನೇ ಮಹಾಯುದ್ಧದಲ್ಲಿ ಭಾರತದ ಪಾತ್ರ ಮಹತ್ವದ್ದು’

ನವದೆಹಲಿ(ಅ.28): ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಶಾಂತಿ ಬಯಸುವುದು ಎಂದರೆ ಯುದ್ಧ ಇಲ್ಲ ಎಂದಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 

ಅತ್ಯಂತ ಬಡವರ ಅಭಿವೃದ್ಧಿಯೂ ಸಹ ಶಾಂತಿಯ ಸಂಕೇತವೇ. ವಿಶ್ವದಲ್ಲಿ ಶಾಂತಿಯ ಬಗ್ಗೆ ಚರ್ಚೆ ನಡೆದಾಗಲೆಲ್ಲಾ ಭಾರತದ ಹೆಸರು ಮತ್ತು ಕೊಡುಗೆಗಳನ್ನು ಸುವರ್ಣಾಕ್ಷರಗಳಲ್ಲಿ ಉಲ್ಲೇಖಿಸಲಾಗುತ್ತದೆ  ಎಂದು ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಹೇಳಿದ್ದಾರೆ. 

ಇದೇ ವೇಳೆ ಮೊದಲ ವಿಶ್ವ ಯುದ್ಧದ ಬಗ್ಗೆಯೂ ಮಾತನಾಡಿರುವ ಪ್ರಧಾನಿ ಮೋದಿ, ವಿಶ್ವಯುದ್ಧ-1 ರಲ್ಲಿ ಭಾರತ ನೇರವಾಗಿ ಭಾಗಿಯಾಗಿರಲಿಲ್ಲವಾದರೂ ಭಾರತದ ಅನೇಕ ಯೋಧರು ಹೋರಾಡಿ ಬಲಿದಾನ ಮಾಡಿದ್ದಾರೆ.  ಯುದ್ಧದಲ್ಲಿ ತಾವು ಯಾರಿಗೂ ಕಮ್ಮಿಯಿಲ್ಲ ಎಂಬುದನ್ನು ಭಾರತೀಯ ಯೋಧರು ತೋರಿಸಿಕೊಟ್ಟಿದ್ದಾರೆ ಎಂದು ಪ್ರಧಾನಿ ಮೋದಿ ಹೇಳ್ದಿದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಟ್ರಂಪ್ ಮಾತ್ರವಲ್ಲ, ಕ್ಲಿಂಟನ್, ಬಿಲ್ ಗೇಟ್ಸ್ ಕೂಡ..' ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಫೋಟೋಗಳು ರಿಲೀಸ್
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!