ಸಿಡಿದೆದ್ದ ಮಾಜಿ ಪ್ರಧಾನಿ: ಕಾವೇರಿಗಾಗಿ ಅಧಿಕೃತವಾಗಿ ಅಖಾಡಕ್ಕಿಳಿದ ದೇವೇಗೌಡರು!

Published : Oct 01, 2016, 02:59 AM ISTUpdated : Apr 11, 2018, 01:02 PM IST
ಸಿಡಿದೆದ್ದ ಮಾಜಿ ಪ್ರಧಾನಿ: ಕಾವೇರಿಗಾಗಿ ಅಧಿಕೃತವಾಗಿ ಅಖಾಡಕ್ಕಿಳಿದ ದೇವೇಗೌಡರು!

ಸಾರಾಂಶ

ಬೆಂಗಳೂರು(ಅ.01): ಕಾವೇರಿ ಜಲ ವಿಚಾರದಲ್ಲಿ ಸುಪ್ರೀಂ ಕೋರ್ಟ್​ ರಾಜ್ಯದ ಪಾಲಿಗೆ ಮರಣಶಾಸನ ಬರೆಯುತ್ತಿದೆ. ಇದರಿಂದ ಸಿಡಿದೆದ್ದಿರುವ ಮಾಜಿ ಪ್ರಧಾನಿ ದೇವೇಗೌಡ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ.

ಮೊದಲಿಂದಲೂ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆಗೆ ಒತ್ತಾಯಿಸಿಕೊಂಡೇ ಜೆಡಿಎಸ್ ವರಿಷ್ಠರು ಬಂದಿದ್ದರು. ಈಗಲೂ ಇದೇ ನಿರ್ಧಾರಕ್ಕೆ ಬದ್ಧರಾಗಿದ್ದು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಇಂದಿನಿಂದ ಕಾವೇರಿ ಹೋರಾಟವನ್ನು ಅಹಿಂಸಾ ಮಾರ್ಗದಲ್ಲಿ ಮುಂದುವರಿಸಲಿದ್ದಾರೆ. ನಿನ್ನೆ ರಾತ್ರಿ ಈ ಬಗ್ಗೆ ಪುತ್ರ ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ದೇವೇಗೌಡ್ರು ಚರ್ಚಿಸಿದ್ದಾರೆ. ಇವತ್ತು ಬೆಳಗ್ಗೆ 6.30ಕ್ಕೆ ಗಾಂಧಿ ಬಜಾರ್ ಬಳಿಯಿರುವ ಕಾರಂಜಿ ಆಂಜನೇಯ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದ್ದು, ನಂತರ ಕೋಟೆ ವೆಂಕಟರಮಣ ದೇವಾಲಯಕ್ಕೆ ಪೂಜೆ ಸಲ್ಲಿಸಿ ವಿಧಾನಸೌಧದ ಬಳಿಯಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.

ಕಠಿಣ ಹೋರಾಟವಾದ ಅಹೋರಾತ್ರಿ ಧರಣಿಗೆ ಮುಂದಾಗಿರುವ ಮಾಜಿ ಪ್ರಧಾನಿಗಳಿಗೆ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಕೂಡ ಸಾಥ್ ನೀಡಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!