
ಉಡುಪಿ(ಅ.17): ನಮ್ಮನ್ನು ಬಿಟ್ಟು ಬೇರೆ ಹೋಗಬೇಡಿ, ಲಿಂಗಾಯತ ವೀರಶೈವರು ಹಿಂದೂಗಳು ಎಂದು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಪೇಜಾವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ ಅವರು, ಅವರ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹೊರಗಿನವನಾಗಿ ಸಲಹೆ ನೀಡುತ್ತಿದ್ದೇನೆ. ನಮ್ಮನ್ನು ಬಿಟ್ಟು ಬೇರೆ ಹೋಗಬೇಡಿ, ಸಹೋದರರಂತೆ ಬಾಳೋಣ. ಲಿಂಗಾಯತರು ಹಿಂದೂಗಳಲ್ಲ ಎಂದರೆ, ಇನ್ಯಾರು ಹಿಂದೂಗಳು.. ಎಂದು ಲಿಂಗಾಯತ ಪ್ರತ್ಯೇಕ ಧರ್ಮವಾದಿಗಳಿಗೆ ಪೇಜಾವರ ಶ್ರೀಗಳ ಪ್ರಶ್ನಿಸಿದ್ದಾರೆ.
ಒಂದಾಗಿದ್ದರೆ ಲಿಂಗಾಯತ ಸಮಾಜಕ್ಕೆ ಬಲ. ಬ್ರಾಹ್ಮಣರಿಂದ, ಮಾಧ್ವರಿಂದ ಬಸವಣ್ಣಗೆ ಅನ್ಯಾಯ ಆಗಿಲ್ಲ. ಪ್ರೇಮದ ಸಲಹೆ, ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.