ಕರ್ನೂಲ್ ಬಳಿ ಪೇಜಾವರ ಶ್ರೀಗಳಿಗೆ ಉಳುಕಿದ ಬೆನ್ನು : 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ

Published : Jan 20, 2018, 06:46 PM ISTUpdated : Apr 11, 2018, 01:02 PM IST
ಕರ್ನೂಲ್ ಬಳಿ ಪೇಜಾವರ ಶ್ರೀಗಳಿಗೆ ಉಳುಕಿದ ಬೆನ್ನು : 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ

ಸಾರಾಂಶ

ರಾತ್ರಿ 9 ಗಂಟೆ ಸಮಯದಲ್ಲಿ  ಪ್ರಯಾಣಿಸುತ್ತಿದ್ದಾಗ ಕರ್ನೂಲಿನ ಪೆದ್ದಪಾಡು ಬಳಿ ರಸ್ತೆ ಉಬ್ಬುಗಳಿದ್ದ ಕಾರಣ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬೆನ್ನು ಉಳುಕಿದೆ.

ಉಡುಪಿ(ಜ.20): ಪೇಜಾವರ ಶ್ರೀಗಳು ನಿನ್ನೆ ಮಂತ್ರಾಲಯದಿಂದ ಹೈದರಾಬಾದ್'ಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೆನ್ನು ಉಳುಕಿ 15 ದಿನ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ.

ರಾತ್ರಿ 9 ಗಂಟೆ ಸಮಯದಲ್ಲಿ  ಪ್ರಯಾಣಿಸುತ್ತಿದ್ದಾಗ ಕರ್ನೂಲಿನ ಪೆದ್ದಪಾಡು ಬಳಿ ರಸ್ತೆ ಉಬ್ಬುಗಳಿದ್ದ ಕಾರಣ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬೆನ್ನು ಉಳುಕಿದೆ. ಆಯಾಸಗೊಂಡ ಶ್ರೀಗಳನ್ನು ಕರ್ನೂಲ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೈದರಾಬಾದ್'ನಿಂದ ಉಡುಪಿಗೆ ತೆರಳಿದ್ದರು.

ಬೆಳಿಗ್ಗೆ ಮಠದಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಸಂಜೆ ಸ್ಕ್ಯಾನಿಂಗಾಗಿ ಹೈಟೆಕ್ ಆಸ್ಪತ್ರೆಗೆ ಕರೆದೊಯ್ದಿದ್ದ ವೈದ್ಯರ ತಂಡ ಸ್ಕಾನಿಂಗ್ ನಂತರ ಮತ್ತೆ ಮಠಕ್ಕೆ ಮರಳಿದ್ದಾರೆ. ನನಗೆ ಬೆನ್ನು ನೋವಿದೆ ಸ್ವಲ್ಪವೂ ನೆಡದಾಡಲು ಆಗುತ್ತಿಲ್ಲ' ಎಂದು ಸ್ವತಃ ಶ್ರೀಗಳು ಹೇಳಿದ್ದು, 15 ದಿನ ಎಲ್ಲೂ ಓಡಾಡದಂತೆ ವೈದರು ಶ್ರೀಗಳಿಗೆ ಸೂಚನೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ