‘ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರೂ...’ ದಾಸರ ಪದಕ್ಕೆ ಪೇಜಾವರ ಶ್ರೀಗಳಿಂದ ನೃತ್ಯ

Published : Jul 05, 2017, 10:24 PM ISTUpdated : Apr 11, 2018, 12:53 PM IST
‘ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರೂ...’ ದಾಸರ ಪದಕ್ಕೆ ಪೇಜಾವರ ಶ್ರೀಗಳಿಂದ ನೃತ್ಯ

ಸಾರಾಂಶ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಆಷಾಢದ ಪ್ರಥಮ ಏಕಾದಶಿಯ ಪ್ರಯುಕ್ತ ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬುಧವಾರ ಹರಿವಾಣದಲ್ಲಿ ತುಳಸಿಮಾಲೆಯನ್ನು ತಲೆಯ ಮೇಲೆ ಹೊತ್ತು ‘ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರೂ...’ ಎಂಬ ದಾಸರ ಪದಕ್ಕೆ ನೃತ್ಯ ಮಾಡಿದರು. 

ಉಡುಪಿ (ಜು.05): ಉಡುಪಿ ಶ್ರೀಕೃಷ್ಣ ಮಠದಲ್ಲಿ ಆಷಾಢದ ಪ್ರಥಮ ಏಕಾದಶಿಯ ಪ್ರಯುಕ್ತ ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬುಧವಾರ ಹರಿವಾಣದಲ್ಲಿ ತುಳಸಿಮಾಲೆಯನ್ನು ತಲೆಯ ಮೇಲೆ ಹೊತ್ತು ‘ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರೂ...’ ಎಂಬ ದಾಸರ ಪದಕ್ಕೆ ನೃತ್ಯ ಮಾಡಿದರು. 
 
ಪ್ರತಿದಿನ ಕೃಷ್ಣ ದೇವರಿಗೆ ರಾತ್ರಿ ಪೂಜೆ ಆದ ನಂತರ ಸೂರ್ಯ ವಾದ್ಯ, ನಾದಸ್ವರ, ಸಂಕೀರ್ತನೆ, ಸಂಗೀತ, ಭಾಗವತ ಪುರಾಣಗಳನ್ನು ಚಂದ್ರಶಾಲೆಯಲ್ಲಿ ನಡೆಸಿದ ನಂತರ, ಎದುರಿನ ಮಂಟಪದಲ್ಲಿ ಸ್ವಾಮೀಜಿಯವರು ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡುತ್ತಾರೆ. ಈ ಸೇವೆಯು ಆಷಾಡ ಮಾಸದ ಶುಕ್ಲ ಏಕಾದಶಿಯಿಂದ ಕಾರ್ತಿಕ ಮಾಸದ ಶುಕ್ಲ ಏಕಾದಶಿಯವರೆಗೆ ಚಾತುರ್ಮಾಸದ 8 ಏಕಾದಶಿಗಳವರೆಗೂ ನಡೆಯುತ್ತದೆ. ಇದನ್ನು ಹರಿವಾಣ ನರ್ತನ ಎಂದು ಕರೆಯುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು: ಸಚಿವ ಅಶ್ವಿನಿ ವೈಷ್ಣವ್
ಆನ್‌ಲೈನ್ ಆರ್ಡರ್ ಮಾಡಿದ್ರೆ ಕೇಕ್ ಮೇಲೆ ಹೀಗಾ ಬರೆಯೋದು?: ಕೇಕ್ ಮೇಲಿನ ಬರಹ ನೋಡಿ ಬರ್ತ್‌ಡೇ ಗರ್ಲ್ ಶಾಕ್