
ಉಡುಪಿ [ಫೆ.11]: ಗಾಯಗೊಂಡ ಜಟಾಯುವಿಗೆ ಶ್ರೀರಾಮ ಮೋಕ್ಷ ನೀಡಿದ ಕಥೆ ಕೇಳಿದ್ದೇವೆ. ಉಡುಪಿಯಲ್ಲಿ ಗಾಯಗೊಂಡ ಜಟಾಯು ರೂಪದ ಗಿಡುಗವೊಂದಕ್ಕೆ ಪೇಜಾವರ ಶ್ರೀಗಳು ವಿಶೇಷ ಮಮಕಾರ ತೋರಿದ್ದಾರೆ.
ಸನ್ಯಾಸಿಗಳಿಗೆ ಸಕಲ ಜೀವರಾಶಿಯ ಮೇಲೂ ಮಮತೆ ಇರುತ್ತೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ದೃಷ್ಟಿಹೀನ ಮರಿಗಿಡುಗವೊಂದು ಉಡುಪಿಯ ಪೇಜಾವರ ಮಠದ ಆವರಣದಲ್ಲಿ, ದಾರಿ ಕಾಣದೆ ಒದ್ದಾಡುತ್ತಿತ್ತು. ಅಲ್ಲಿದ್ದವರು ಗಾಯಾಳು ಗಿಡುಗವನ್ನು ಪೇಜಾವರ ಶ್ರೀಗಳ ಕೈಗೆ ಒಪ್ಪಿಸಿದರು. ಪಕ್ಷಿಯ ಸ್ಥಿತಿ ಕಂಡು ಸ್ವಾಮೀಜಿ ಮರುಗಿ ನೇತ್ರ ಚಿಕಿತ್ಸೆ ನೀಡಿದ್ದಾರೆ. ನೇತ್ರತಜ್ಞರ ಸಲಹೆ ಪಡೆದರು, ವಿಶೇಷ ಆರೈಕೆ ಮಾಡಿ ಸಲಹುತಿದ್ದಾರೆ.
ಇದೊಂದು ಅಪರೂಪದ ಪ್ರಸಂಗ. ಮನುಷ್ಯನ ಕಣ್ಣಿಗೆ ತಜ್ಞ ಚಿಕಿತ್ಸೆ ನೀಡುವ ವೈದ್ಯರೇ ಗಿಡುಗಕ್ಕೆ ದೃಷ್ಟಿ ಬರಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಗಳೂರಿನ ವೈದ್ಯರ ಸಲಹೆ ಪಡೆದು ಚಿಕಿತ್ಸೆ ಆರಂಭಿಸಿದ್ದಾರೆ. ಹತ್ತು ದಿನಗಳ ಕಾಲ ಐ ಡ್ರಾಪ್ಸ್ ಹಾಕಲಾಗುತ್ತೆ. ನಂತರ ವಿಶೇಷ ಪರಿಕರಗಳನ್ನು ತಂದು ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ತೀರ್ಮಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.