ರೈಲಿಗೆ ನವಿಲು ಡಿಕ್ಕಿ: 1 ತಾಸು ನಿಂತ ರೈಲು

Published : Jun 10, 2018, 09:20 AM IST
ರೈಲಿಗೆ ನವಿಲು ಡಿಕ್ಕಿ:  1 ತಾಸು ನಿಂತ ರೈಲು

ಸಾರಾಂಶ

ನವಿಲು ಡಿಕ್ಕಿ ಹೊಡೆದ ಪರಿಣಾಮ ಒಂದು ತಾಸಿಗೂ ಹೆಚ್ಚುಕಾಲ ರೈಲು ನಿಲುಗಡೆಗೊಂಡ ಘಟನೆ  ಚನ್ನಪಟ್ಟಣದ ರೈಲು ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. 

ಚನ್ನಪಟ್ಟಣ: ನವಿಲು ಡಿಕ್ಕಿ ಹೊಡೆದ ಪರಿಣಾಮ ಒಂದು ತಾಸಿಗೂ ಹೆಚ್ಚುಕಾಲ ರೈಲು ನಿಲುಗಡೆಗೊಂಡ ಘಟನೆ ಇಲ್ಲಿನ ರೈಲು ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ಮೈಸೂರು ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಾಲ್ಗುಡಿ ಎಕ್ಸ್‌ಪ್ರೆಸ್‌ ರೈಲು ಇನ್ನೇನು ಚನ್ನಪಟ್ಟಣ ರೈಲ್ವೆ ನಿಲ್ದಾಣ ಸಮೀಪಿಸಬೇಕು ಎಂಬ ವೇಳೆಗೆ ನವಿಲು ಹಾರಿ ಬಂದು ರೈಲಿನ ಪವರ್‌ ಬಾಕ್ಸ್‌ಗೆ ಡಿಕ್ಕಿ ಹೊಡೆದು ಸಾವಿಗೀಡಾಗಿದೆ. ಪವರ್‌ ಬಾಕ್ಸ್‌ಗೆ ನವಿಲು ಡಿಕ್ಕಿ ಹೊಡೆದ ಪರಿಣಾಮ ಇಂಜಿನ್‌ಗೆ ವಿದ್ಯುತ್‌ ಸರಬರಾಜು ಸ್ಥಗಿತ ಗೊಂಡಿದೆ.

ಪವರ್‌ ಬಾಕ್ಸ್‌ಗೆ ಹಾನಿಯಾದ ಪರಿಣಾಮ ಒಂದು ತಾಸು ರೈಲು ಸಂಚಾರ ಸ್ಥಗಿತ ಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ರೈಲ್ವೆ ಇಲಾಖೆ ತಂತಜ್ಞರು ಪವರ್‌ ಬಾಕ್ಸ್‌ ದುರಸ್ತಿಗೊಳಿಸಿದ ಬಳಿಕ ರೈಲು ಬೆಂಗಳೂರಿನ ಕಡೆ ಪ್ರಯಾಣ ಬೆಳೆಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?