ಚಿನ್ನಮ್ಮ ಸಿಎಂ ಆಗುವುದಕ್ಕೆ ಸ್ಟಾಲಿನ್ ಆಕ್ಷೇಪ : ಕರಾಳ ದಿನ ಎಂದ ಕಾಂಗ್ರೆಸ್

Published : Feb 05, 2017, 05:13 AM ISTUpdated : Apr 11, 2018, 12:51 PM IST
ಚಿನ್ನಮ್ಮ ಸಿಎಂ ಆಗುವುದಕ್ಕೆ ಸ್ಟಾಲಿನ್ ಆಕ್ಷೇಪ : ಕರಾಳ ದಿನ ಎಂದ ಕಾಂಗ್ರೆಸ್

ಸಾರಾಂಶ

ಜವಾಬ್ದಾರಿಯುತ ಪಕ್ಷವಾಗಿರುವ ಡಿಎಂಕೆಯು ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸುತ್ತಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಅವಕಾಶ ಒದಗಿ ಬಂದರೂ ಜನರ ಆಕಾಂಕ್ಷೆಗಳು ಹಾಗೂ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ತೆಗೆದುಕೊಳ್ಳಲಾಗುತ್ತದೆ' ಎಂದಿದ್ದಾರೆ

ಚೆನ್ನೈ(ಫೆ.05): ತಮಿಳುನಾಡಿನ ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಶಶಿಕಲಾ ನಟರಾಜನ್ ಬಗ್ಗೆ ಡಿಎಂಕೆ ಕಾರ್ಯಾಕಾರಿ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಮಿಳು ನಾಡು ಜನತೆ 2016 ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರನ್ನು ಬಿಟ್ಟು ಶಶಿಕಲಾ ನಟರಾಜನ್ ಅವರಿಗಾಗಲಿ ಅಥವಾ ಪನ್ನೀರ್ ಸೆಲ್ವಂ ಅವರಿಗಾಗಲಿ ಅಧಿಕಾರ ನೀಡಿರಲಿಲ್ಲ. ಇದು ಪಕ್ಷದ ಮೇಲೆ ಪರಿಣಾಮ ಬೀರಬಹುದು ವಿನಾ ಆಡಳಿತದಲ್ಲಿ ಪರಿಣಾಮ ಬೀರುವ ಸಾಧ್ಯತೆ ಕಡಿಮೆಯಿದೆ ಎಂದಿದ್ದಾರೆ.

ಜವಾಬ್ದಾರಿಯುತ ಪಕ್ಷವಾಗಿರುವ ಡಿಎಂಕೆಯು ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸುತ್ತಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಅವಕಾಶ ಒದಗಿ ಬಂದರೂ ಜನರ ಆಕಾಂಕ್ಷೆಗಳು ಹಾಗೂ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ತೆಗೆದುಕೊಳ್ಳಲಾಗುತ್ತದೆ' ಎಂದು ತಿಳಿಸಿದ್ದಾರೆ.

ಕರಾಳ ದಿನ ಎಂದ ಕಾಂಗ್ರೆಸ್: ಶಶಿಕಲಾ ಮುಖ್ಯಮಂತ್ರಿಯಾಗಿರುವುದಕ್ಕೆ  ಕಾಂಗ್ರೆಸ್ ಕೂಡ ವಿರೋಧ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಯಾಗುವ ದಿನವನ್ನು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!