
ನವದೆಹಲಿ (ಸೆ.09): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಸಾವಿಗೆ ಸೈದ್ಧಾಂತಿಕ ಸಂಘರ್ಷಗಳೇ ಕಾರಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಗೌರಿ ಲಂಕೇಶ್ ಹತ್ಯೆಗೆ ಆರ್'ಎಸ್'ಎಸ್ ಹಾಗೂ ಬಿಜೆಪಿಯೇ ಕಾರಣ ಎಂದು ತಮ್ಮ ಪಕ್ಷ ಎಲ್ಲಿಯೂ ಹೇಳಿಲ್ಲ ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಹಿಂದೆ ಆರ್'ಎಸ್'ಎಸ್ ಹಾಗೂ ಬಿಜೆಪಿ ಇದೆ ಎಂದು ಯಾವತ್ತೂ ಹೇಳಿಲ್ಲ. ಆದರೆ ಸೈದ್ಧಾಂತಿಕ ಸಂಘರ್ಷವಿತ್ತು. ಹೀಗಾಗಿಯೇ ಅವರ ಹತ್ಯೆಯಾಯಿತು ಎಂದು ಖರ್ಗೆ ಹೇಳಿದ್ದಾರೆ. ಶೀಘ್ರದಲ್ಲಿಯೇ ಅಪರಾಧಿಗಳನ್ನು ಹಿಡಿದು ಶಿಕ್ಷಿಸಬೇಕು. ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಜನರು ಒಂದಾಗಬೇಕು. ಹಂತಕರಿಗೆ ಸರಿಯಾದ ಪಾಠ ಕಲಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರೊಂದಿಗೆ ನಾನು ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.