ಷೇರು ಮಾರುಕಟ್ಟೆಯಲ್ಲಿ ಹಣ ದ್ವಿಗುಣಗೊಳಿಸುವುದಾಗಿ ಹೇಳಿ 25 ಕೋಟಿ ಪಂಗನಾಮ

Published : Feb 26, 2017, 01:19 PM ISTUpdated : Apr 11, 2018, 01:11 PM IST
ಷೇರು ಮಾರುಕಟ್ಟೆಯಲ್ಲಿ ಹಣ ದ್ವಿಗುಣಗೊಳಿಸುವುದಾಗಿ ಹೇಳಿ 25 ಕೋಟಿ ಪಂಗನಾಮ

ಸಾರಾಂಶ

ಹುಬ್ಬಳ್ಳಿಯ ಗೋಕುಲಧಾಮದ ನಿವಾಸಿ ಹಾಗೂ ಜೆಡಿಎಸ್ ಕಾರ್ಯಕರ್ತ ವಾಸೀಮ ಮುಕಾಶಿ ಎಂಬ ವ್ಯಕ್ತಿ ಹಣ ದ್ವಿಗುಣ ಗೊಳಿಸುವುದಾಗಿ ಹೇಳಿ 300ಕ್ಕೂ ಅಧಿಕ ಜನರಿಂದ 25 ಕೋಟಿ ರೂಪಾಯಿಗೂ ಅಧಿಕ ಹಣ ಪಂಗನಾಮ ಹಾಕಿದ್ದಾನೆ.

ಹುಬ್ಬಳ್ಳಿ (ಫೆ.26): ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿ ನಿಮ್ಮ ಹಣ ದ್ವಿಗುಣವಾಗುತ್ತದೆಯೆಂದು ಹೇಳಿ ಸುಮಾರು 25 ಕೋಟಿ ರೂಪಾಯಿಗೂ ಅಧಿಕ ಹಣ ವಂಚಿಸಿ ವಂಚಕನೋಬ್ಬ ಪರಾರಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಗೋಕುಲಧಾಮದ ನಿವಾಸಿ ಹಾಗೂ ಜೆಡಿಎಸ್ ಕಾರ್ಯಕರ್ತ ವಾಸೀಮ ಮುಕಾಶಿ ಎಂಬ ವ್ಯಕ್ತಿ ಹಣ ದ್ವಿಗುಣ ಗೊಳಿಸುವುದಾಗಿ ಹೇಳಿ 300ಕ್ಕೂ ಅಧಿಕ ಜನರಿಂದ 25 ಕೋಟಿ ರೂಪಾಯಿಗೂ ಅಧಿಕ ಹಣ ಪಂಗನಾಮ ಹಾಕಿದ್ದಾನೆ.

ಅಲ್ಲದೇ, ಕಳೆದ ಒಂದು ತಿಂಗಳಿನಿಂದ ಯಾರಿಗೂ ಮುಖ ತೋರಿಸದೆ, ಸಂಪರ್ಕಕ್ಕೆ ಸಿಗದೇ ಪರಾರಿಯಾಗಿದ್ದಾನೆ.

ಇದರಿಂದ ಆಕ್ರೋಶಗೊಂಡ ಹಣ ಕಳೆದುಕೊಂಡವರು ಈತನ ಮನೆಗೆ ನುಗ್ಗಿದ್ದಾರೆ. ವಾಸೀಮ ತಲೆ ಮರೆಸಿಕೊಂಡಿದ್ದರಿಂದ ಆತನ ಅಣ್ಣ ಫಿರೋಜ್ ಮೊಕಾಶಿ ಅವರನ್ನ ಥಳಿಸಿ ಹಳೇ ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!