ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಮಂಡ್ಯ ಜಿಲ್ಲೆಯ ಹೋರಾಟಗಾರಿಗೆ ಹೊಸ ಸಂಕಷ್ಟ

Published : Oct 09, 2017, 09:31 AM ISTUpdated : Apr 11, 2018, 12:55 PM IST
ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಮಂಡ್ಯ ಜಿಲ್ಲೆಯ ಹೋರಾಟಗಾರಿಗೆ ಹೊಸ ಸಂಕಷ್ಟ

ಸಾರಾಂಶ

ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಮಂಡ್ಯ ಜಿಲ್ಲೆಯ ಕಾವೇರಿ ಹೋರಾಟಗಾರಿಗೆ ಈಗ ಹೊಸ ಸಂಕಷ್ಟ ಶುರುವಾಗಿದೆ. ಹೋರಾಟದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪೊಲೀಸರು ಅನೇಕ ಪ್ರಕರಣಗಳನ್ನ ದಾಖಲಿಸಿದ್ದು, ಜಾಮೀನು ಪಡೆಯಲು ರೈತರು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಮಂಡ್ಯ(ಅ.09): ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಮಂಡ್ಯ ಜಿಲ್ಲೆಯ ಕಾವೇರಿ ಹೋರಾಟಗಾರಿಗೆ ಈಗ ಹೊಸ ಸಂಕಷ್ಟ ಶುರುವಾಗಿದೆ. ಹೋರಾಟದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪೊಲೀಸರು ಅನೇಕ ಪ್ರಕರಣಗಳನ್ನ ದಾಖಲಿಸಿದ್ದು, ಜಾಮೀನು ಪಡೆಯಲು ರೈತರು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ತಮ್ಮ ಸಾಲವಿಲ್ಲದ ಜಮೀನಿನ ಆರ್.ಟಿ.ಸಿ ಸಲ್ಲಿಸಬೇಕು. ಆದರೆ,  ಜಿಲ್ಲೆಯ ಬಹುತೇಕ ರೈತ್ರು ಒಂದಲ್ಲ ಒಂದು ಬ್ಯಾಂಕ್ ನಲ್ಲಿ ಜಮೀನಿನ ಮೇಲೆ ಸಾಲ ಪಡೆದಿದ್ದಾರೆ. ಇನ್ನು ಸಾಲ ಪಡೆಯದವರ ‌ಜಮೀನಿನ RTC ಬೇಕಾದ್ರೆ ಹೋರಾಟಗಾರರೇ ಜಮೀನಿನ ಬಾಕಿ ಕಂದಾಯ, ಮನೆಯ ಕಂದಾಯ ಕಟ್ಟಿ RTC ಪಡೆಯಬೇಕಾಗಿದೆ.

ಕಾವೇರಿ ಹೋರಾಗಾರಿಗೆ ಇಷ್ಟೆಲ್ಲ ಕಷ್ಟವಾಗುತ್ತಿದ್ದರೂ ಕಾವೇರಿ ಹೋರಾಟ ಹಿತರಕ್ಷಣಾ ಸಮಿತಿ ನೆರವಿಗೆ ಬರ್ತಿಲ್ಲ ಅಂತಾ ಕಾವೇರಿ ಹೋರಾಟಗಾರ ಇಂಡವಾಳು ಬಸವರಾಜು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಅಲ್ದೆ ಕಾವೇರಿ ಹಿತರಕ್ಷಣಾ ವೇದಿಕೆಯವರು ಹೋರಾಟಕ್ಕೆ ಬಂದ ಹಣವನ್ನ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಜಿ. ಮಾದೇಗೌಡ್ರು ಮಗನಿಗೆ ಮಿಮ್ಸ್ ಆಸ್ಪತ್ರೆಯ ನಿರ್ದೇಶಕನನ್ನಾಗಿ ಮಾಡಿ ತೆಪ್ಪಗಿದ್ದಾರೆ  ಅಂತ ಆರೋಪ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ