
ಬೆಂಗಳೂರು(ಮೇ.14): ವಸಂತನಗರದಲ್ಲಿ ರಾತ್ರೋ ರಾತ್ರಿ ಬಿಬಿಎಂಪಿಯಿಂದ ದೇವಸ್ಥಾನ ಮತ್ತು ಚರ್ಚ್ ಧ್ವಂಸಮಾಡಿರುವುದನ್ನು ಖಂಡಿಸಿ ಅಲ್ಲಿನ ಸ್ಥಳೀಯರು ನಿನ್ನೆ ಅಹೋರಾತ್ರಿ ಧರಣಿ ನಡೆಸಿದರು.
ರಾತ್ರಿ ಇಡೀ ದೇವಸ್ಥಾನ ಧ್ವಂಸಗೊಳಿಸಿದ ಸ್ಥಳದಲ್ಲೇ ಧರಣಿ ನಡೆಸಿದರು. ಈ ವೇಳೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು ನಮ್ಮ ಹೋರಾಟ ಮುಂದುವರಿಯುತ್ತದೆ. ಕಳೆದ 30 ವರ್ಷದಿಂದ ಈ ದೇವಸ್ಥಾನ ಇತ್ತು. ಆದರೆ ನಿನ್ನೆ ಏಕಾಏಕಿ ಬಿಬಿಎಂಪಿ ಅಧಿಕಾರಿಗಳು ದೇವಸ್ಥಾನವನ್ನು ಕೆಡವಿದ್ದಾರೆ. ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಸೋಮವಾರ ಬಿಬಿಎಂಪಿ ಕಚೇರಿಗೂ ಸಹ ಮುತ್ತಿಗೆ ಹಾಕುತ್ತೇವೆ. ಅದಕ್ಕೂ ಜಗ್ಗದೇ ಹೋದರೆ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.