
ಬಾಗಲಕೋಟೆ(ಸೆ.17): ಈ ಬಾರಿಯ ಗಣೇಶ ಹಬ್ಬ ಮತ್ತು ಮೊಹರಂ ಹಬ್ಬ ಭಾವೈಕ್ಯತೆಯ ಸಂದೇಶ ಸಾರುವಲ್ಲಿ ಯಶಸ್ವಿಯಾಗಿದೆ. ಕಾರಣ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಹಿಂದೂ-ಮುಸ್ಲಿಂ ಭಾಂಧವರು ಒಟ್ಟಾಗಿ ಗಣೇಶ ಹಬ್ಬ ಮತ್ತು ಮೊಹರಂ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ್ದಾರೆ.
ಇಲ್ಲಿನ ಮುಧೋಳ ತಾಲೂಕಿನ ಮಹಾಲಿಂಗಪೂರದ ಬುದ್ನಿ ಪಿಡಿ ಕಾಲೋನಿಯಲ್ಲಿ ಏಕಕಾಲಕ್ಕೆ ಗಣೇಶ ಚತುರ್ಥಿ ಮತ್ತು ಮೊಹರಂ ಹಬ್ಬ ಆಚರಣೆ ಮಾಡಲಾಗಿದೆ. ಒಂದೇ ಕಡೆ ಗಣೇಶ ಮೂರ್ತಿ ಮತ್ತು ಮೊಹರಂ ದೇವರನ್ನು ಕೂರಿಸಿ ಹಿಂದೂ-ಮುಸ್ಲಿಂ ಭಕ್ತರು ಪೂಜೆ ನೆರವೇರಿಸಿದ್ದಾರೆ.
"
ಅಲ್ಲದೇ ರಾತ್ರಿ ವೇಳೆ ನಡೆಯುವ ಮೆರವಣಿಗೆಯಲ್ಲೂ ಯುವಕರು ಹಣೆಗೆ ಕೇಸರಿ ಮತ್ತು ಹಸಿರು ಪಟ್ಟಿ ಕಟ್ಟಿಕೊಂಡು ಕುಣಿದು ಕುಪ್ಪಳಿಸಿದರು. ಊರಿನ ಜನ ಕೂಡ ಒಂದೇ ಸ್ಥಳದಲ್ಲಿರುವ ಮೊಹರಂ ದೇವರು ಮತ್ತು ಗಣೇಶ ಮೂರ್ತಿಯ ದರ್ಶನಕ್ಕಾಗಿ ಬರುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.