
ಗುರುದಾಸ್ಪುರ್[ಜು.02]: ಪಂಜಾಬ್ ನ ಗುರುದಾಸ್ ಪುರದಿಂದ ಸಂಸದನಾಗಿ ಚುನಾಯಿತರಾದ ನಟ ಸನ್ನಿ ಡಿಯೋಲ್ ಸರ್ಕಾರಿ ಕಾರ್ಯಕ್ರಮಗಳಲ್ಲಿ ತನ್ನ ಪ್ರತಿನಿಧಿಯಾಗಿ ಭಾಗವಹಿಸಲು ಲೇಖಕ ಗುರುಪ್ರೀತ್ ಸಿಂಗ್ ರನ್ನು ನೇಮಿಸಿಕೊಂಡಿದ್ದಾರೆ. 'ನನ್ನ ಪರವಾಗಿ ಸಭೆ ಹಾಗೂ ಮುಖ್ಯವಾದ ವಿಚಾರಗಳ ಬಗ್ಗೆ ಗುರುಪ್ರೀತ್ ಸಿಂಗ್ ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದು ಸನ್ನಿ ಡಿಯೋಲ್ ಘೋಷಿಸಿದ್ದಾರೆ.
ಆದರೆ ಸಂಸದನ ಈ ಘೋಷಣೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಟ್ವಿಟರ್ ನಲ್ಲಿ ಭಾರೀ ಟ್ರೋಲ್ ಆಗುತ್ತಿದೆ.
ಪಂಜಾಬ್ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸುಖಿಂದರ್ ಸಿಂಗ್ ರಂಧಾವಾ, ‘ಡಿಯೋಲ್ ಅವರು ತಮ್ಮ ಕ್ಷೇತ್ರಕ್ಕೆ ಪ್ರತಿನಿಧಿಯೊಬ್ಬರನ್ನು ನೇಮಿಸಿಕೊಳ್ಳುವ ಮೂಲಕ ಜನಾದೇಶಕ್ಕೆ ದ್ರೋಹ ಬಗೆದಿದ್ದಾರೆ. ಓರ್ವ ಸಂಸದ ಹೇಗೆ ತನ್ನ ಪ್ರತಿನಿಧಿಯನ್ನು ನೇಮಿಸಿಕೊಳ್ಳುತ್ತಾರೆ. ಮತದಾರರು ಡಿಯೋಲ್ ಅವರನ್ನು ಸಂಸದರನ್ನಾಗಿ ಆರಿಸಿದ್ದಾರೆ. ಡಿಯೋಲ್ ಅವರ ಪ್ರತಿನಿಧಿಯನ್ನಲ್ಲ’ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.