ಸಿದ್ದರಾಮಯ್ಯ ಪೊಲಿಟಿಕಲ್ ಸೀಕ್ರೇಟ್ ತಿಳಿಸಿದ ಜಮೀರ್‌

Published : Oct 20, 2018, 09:51 AM IST
ಸಿದ್ದರಾಮಯ್ಯ ಪೊಲಿಟಿಕಲ್ ಸೀಕ್ರೇಟ್ ತಿಳಿಸಿದ ಜಮೀರ್‌

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸೀಕ್ರೇಟ್ ಒಂದನ್ನು ಜಮೀರ್ ಅಹಮದ್ ಹೇಳಿದ್ದಾರೆ. 

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಘೋಷಿಸಿದರೂ ಜನರು ಅವರನ್ನು ಸುಮ್ಮನೆ ಕೂರಲು ಬಿಡಲ್ಲ. ಹೀಗಾಗಿ ಅವರು ನಿರ್ಧಾರ ಬದಲಿಸಲಿದ್ದಾರೆ ಎಂದು ಆಹಾರ, ಹಜ್‌ ಮತ್ತು ವಕ್ಫ್ ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ. ಇದಕ್ಕೆ ಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ರಾಜಕೀಯ ಜೀವನವನ್ನು ಉದಾಹರಣೆಯಾಗಿ ನೀಡಿದ್ದಾರೆ. 

ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮಂಗಳೂರಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾರಣಿಗಳನ್ನು ಅಭಿಮಾನಿಗಳು ಅಷ್ಟುಸುಲಭವಾಗಿ ರಾಜಕೀಯದಿಂದ ನಿವೃತ್ತಿಯಾಗಲು ಬಿಡುವುದಿಲ್ಲ. ಈ ಹಿಂದೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕೂಡ ರಾಜಕೀಯ ನಿವೃತ್ತಿ ಘೋಷಿಸಿದ್ದರು. 

ಅವರೀಗಲೂ ಸಕ್ರಿಯ ರಾಜಕೀಯದಲ್ಲೇ ಇದ್ದಾರೆ. ಅಲ್ಲದೆ ಸಿದ್ದರಾಮಯ್ಯ ರಾಜಕಾರಣದಲ್ಲಿ ಇರಬೇಕಾದ ಅಗತ್ಯ ಇದೆ. ದೇವೇಗೌಡರಂತೆ ಸಿದ್ದರಾಮಯ್ಯ ಕೂಡ ನಿರ್ಧಾರ ಬದಲಿಸಲಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?