
ಮೈಸೂರು(ಅ.08): ಮಂಗಳ ಮುಖಿಯರು ಅಟ್ಟಿಸಿಕೊಂಡು ಬಂದ ಕಾರಣಕ್ಕೆ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿ ಕೊಂದಿರುವ ಘಟನೆ ಕೋರೆಹುಂಡಿ ಗ್ರಾಮದಲ್ಲಿ ನಡೆದಿದೆ.
ಮೃತ ರಮೇಶ್ ಮೈಸೂರು ಜಿಲ್ಲೆಯ ಬದನವಾಳು ನಿವಾಸಿಯಾಗಿದ್ದು, ರಮೇಶ್ ರಸ್ತೆಯಲ್ಲಿ ಸಂಚಾರ ಮಾಡುವಾಗ ಆತನಿಗೆ ಮಂಗಳ ಮುಖಿಯರು ಆತನಿಗೆ ಕಾಟ ನೀಡಲು ಶುರು ಮಾಡಿದ್ರು. ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮೃತ ರಮೇಶ್, ಕೋರೆಹುಂಡಿ ಗ್ರಾಮದ ಚಂದ್ರಶೇಖರ್ ಎಂಬುವರ ಕೊಟ್ಟಿಗೆಗೆ ಪ್ರವೇಶ ಮಾಡಿ ಅಲ್ಲಿ ಅವಿತು ಕುಳಿತುಕೊಂಡಿದ್ದನ್ನು. ಇದನ್ನ ಗಮನಿಸಿದ ಸ್ಥಳೀಯರು ಮೃತ ರಮೇಶ್'ನನ್ನು ಕಳ್ಳನೆಂದು ಭಾವಿಸಿ ಕಂಬಕ್ಕೆ ಕಟ್ಟಿಹಾಕಿ ತೀವ್ರ ಹಲ್ಲೆ ನಡೆಸಿದ್ರು. ಹಲ್ಲೆಗೊಳಾದ ರಮೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಸಿ.ಪಿ.ಐ.ಗೋಪಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.