
ನವದೆಹಲಿ (ಏ. 25): ಸರ್ಕಾರಿ ಸಭೆ-ಸಮಾರಂಭದಲ್ಲಿ ಮಾಂಸಾಹಾರ ನಿಷೇಧಿಸಬೇಕೆಂದು ಪ್ರಾಣಿ ದಯಾ ಸಂಘಟನೆ ‘ಪೆಟಾ' ಪ್ರಧಾನಿ ಮೋದಿ ಬಳಿ ಇವತ್ತು ಮನವಿ ಮಾಡಿದೆ.
ಇತ್ತೀಚಿಗಷ್ಟೇ ಜರ್ಮನಿಯಲ್ಲಿ ಈ ಕಾಯ್ದೆ ಜಾರಿ ಆಗಿದ್ದು, ಅದೇ ಮಾದರಿಯಲ್ಲಿ ಭಾರತದಲ್ಲಿ ಕೂಡ ಸರ್ಕಾರಿ ಸಮಾರಂಭದಲ್ಲಿ ಮಾಂಸಾಹಾರದ ಎಲ್ಲಾ ಪದಾರ್ಥಾಗಳನ್ನು ನಿಷೇಧಿಸಬೇಕೆಂದು ಪೆಟಾ ಮನವಿ ಮಾಡಿದೆ.
ದೇಶದಲ್ಲಿ ಪ್ರಾಣಿಗಳ ಸಂಖ್ಯೆ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ‘ಪೆಟಾ' ಈ ರೀತಿ ಮನವಿ ಮಾಡಿದೆ.
ಈ ಹಿಂದೆ ತಮಿಳುನಾಡಿನಲ್ಲಿ ಪ್ರಚಲಿತವಿರುವ ಜಲ್ಲಿಕಟ್ಟು ಕ್ರೀಡೆಯನ್ನು ಕೂಡಾ ನಿಷೇಧಿಸಬೇಕೆಂದು ಪೇಟಾ ಸಂಘಟನೆಯು ಆಗ್ರಹಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.