
ಹುಬ್ಬಳ್ಳಿ : ಸಿನಿಮಾ ನಟರ ಮೇಲೆ ನಡೆದ ಐಟಿ ದಾಳಿ ಕೇಂದ್ರದ ತೆರಿಗೆ ಇಲಾಖೆ ನಿರ್ಧಾರವಾದುದು. ಅದರಲ್ಲಿ ಯಾವುದೇ ರೀತಿ ವಿಶೇಷತೆ ಇಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ತೆರಿಗೆ ವಂಚನೆ ಹಾಗೂ ತೆರಿಗೆ ಪಾವತಿ ಮೇಲೆ ಅನುಮಾನ ಮೂಡಿದಲ್ಲಿ ದಾಳಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿನ ಏರಿಕೆ ಸಂಬಂಧ ಪ್ರತಿಕ್ರಿಯಿಸಿದ ಸಿಎಂ, ಪೆಟ್ರೋಲ್, ಡೀಸೆಲ್ ಬೆಲೆ ಕೇಂದ್ರ ಸರ್ಕಾರ ಇಳಿಸಿಲ್ಲ. ಆದರೆ ಇಡೀ ದೇಶದಲ್ಲಿಯೇ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಅತ್ಯಂತ ಕಡಿಮೆ ಇದೆ. ನಾವು ತೆರಿಗೆ ಏರಿಸಿದರೂ ನಮ್ಮ ಪಕ್ಕದ ರಾಜ್ಯಗಳಿಗೆ ಹೊಲಿಕೆ ಮಾಡಿದರೆ ನಮ್ಮ ದರ ಅತ್ಯಂತ ಕಡೆಮೆ ಪ್ರಮಾಣದಲ್ಲಿದೆ ಎಂದರು.
ಸಾಲಮನ್ನಾ : ಇನ್ನು ರಾಜ್ಯದಲ್ಲಿ ರೈತರ ಸಾಲಮನ್ನಾಗಾಗಿ ಯಾವುದೇ ಯೋಜನೆಯಿಂದಲೂ ಕೂಡ ಹಣ ಪಡೆದುಕೊಳ್ಳುತ್ತಿಲ್ಲ. ಈಗಾಗಲೇ ಸಾಲಮನ್ನಾಗಾಗಿ 6500 ಕೋಟಿ ಹಣವನ್ನು ಮೀಸಲಿಟ್ಟಿದ್ದಾಗಿ ಈ ವೇಳೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.