
ದಯಾದ್ರಾ, ಗುಜರಾತ್: ಗುಜರಾತ್ ವಿಧಾನಸಭೆಗೆ ಚುನಾವಣೆಗಳು ಸಮೀಸುತ್ತಿದ್ದಂತೆ, ಅಖಾಡ ರಂಗೇರತೊಡಗಿದೆ. ಇಂದು ದಯಾದ್ರದಲ್ಲಿ ಚುನಾವಣಾ ಸಭೆಯನ್ನುದ್ದೇಶಿ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಪೆಟ್ರೋಲ್ ದರವು ಎಲ್ಲಾ ಕಡೆ ಕೆಳಗಿಳಿಯುತ್ತಿದೆ, ಆದರೆ ಭಾರತದಲ್ಲಿ ಮಾತ್ರ ಹೆಚ್ಚಾಗುತ್ತಿದೆ ಎಂದಿರುವ ರಾಹುಲ್ ಗಾಂಧಿ, ಕೇಂದ್ರದ ತಪ್ಪು ಆರ್ಥಿಕ ನೀತಿಗಳೇ ಕಾರಣವೆಂದಿದ್ದಾರೆ.
ಜಿಎಸ್ಟಿಯನ್ನು ಜಾರಿಗೊಳಿಸಿರುವ ವಿಧಾನವನ್ನು ಟೀಕಿಸಿದ ಕಾಂಗ್ರೆಸ್ ಉಪಾಧ್ಯಕ್ಷ, ದಿನಬಳಕೆ ವಸ್ತುಗಳ ಬೆಲೆಗಳು ಗಗನಕ್ಕೇರರುತ್ತಿವೆ, ಇತರ ಎಲ್ಲಾ ಕಡೆ ಪೆಟ್ರೋಲ್ ದರಗಳು ಕಡಿಮೆಯಾಗುತ್ತಿವೆ ಆದರೆ ಭಾರತದಲ್ಲಿ ಮಾತ್ರ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ.
ಡಿಸೆಂಬರ್’ನಲ್ಲಿ ಗುಜರಾತ್ ವಿಧಾನಸಭೆಗೆ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.