
ರಾಜ್ಯಾದ್ಯಂತ ಪೆಟ್ರೋಲ್ ಬಂಕ್'ಗಳಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್'ಗಳನ್ನು ಸ್ವೀಕರಿಸದಿರಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದಾರೆ.
ಕ್ಯಾಶ್ ಲೆಸ್ ವ್ಯವಹಾರಕ್ಕೆ ಸೆಡ್ಡು ಹೊಡೆದಿರುವ ಬಂಕ್ ಮಾಲೀಕರು ಇಂದು ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಕೆಯನ್ನು ಸ್ಥಗಿತಗೊಳಿಸಲಿದ್ದಾರೆ. ಬ್ಯಾಂಕ್ಗಳು ಬಂಕ್ ಮಾಲೀಕರಿಗೆ ಶೇ.1 ರಷ್ಟು ಸರ್ ಚಾರ್ಜ್ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್ಗಳನ್ನು ಬಳಕೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ರಾಜ್ಯ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಆರ್ ರವೀಂದ್ರನಾಥ್ ಹೇಳಿದ್ದಾರೆ.
ಜನವರಿ 9 ರಿಂದ ಅಂದರೆ ನಾಳೆ ಬೆಳಗ್ಗೆಯಿಂದ ಸರ್ ಚಾರ್ಜ್ ವಿಧಿಸುವುದಾಗಿ ಹೇಳಲಾಗಿದೆ. ಹಾಗಾಗಿ ಇಂದು ಮಧ್ಯರಾತ್ರಿಯಿಂದಲೇ ಕಾರ್ಡ್ಗಳ ಬಳಕೆ ಇಲ್ಲ. ಪ್ರಧಾನಿ ಮೋದಿ ಕ್ಯಾಶ್ಲೆಸ್ ವ್ಯವಹಾರ ಮಾಡಿ ಅಂತಾ ಹೇಳ್ತಾರೆ. ಪೆಟ್ರೋಲ್ ಬಂಕ್ಗಳಲ್ಲಿ ಶೇ.90 ರಷ್ಟು ಕಾರ್ಡ್ ಬಳಕೆ ಮಾಡಲಾಗುತ್ತಿದೆ. ಇದರಿಂದ ಹೇಗೆ ವ್ಯವಹಾರ ಮಾಡೋದು ಅಂತ ರವೀಂದ್ರ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.