ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲು ಮಸೀದಿ!

By Web DeskFirst Published Dec 22, 2018, 11:29 AM IST
Highlights

ತ್ರಿವರ್ಣ ಧ್ವಜದಲ್ಲಿ ಮಸೀದಿ: ಯುಪಿಯಲ್ಲಿ ಮುಸ್ಲಿಮರ ವಿರುದ್ಧ ಹಿಂದೂಗಳ ದೂರು!

ಶಹಜಹಾನ್‌ಪುರ[ಡಿ.22]: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿನ ಪುರಾಣ್‌ನಗರದಲ್ಲಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಜುಲಸ್‌-ಇ-ಗೌಸಿಯಾ ಕಾರ್ಯಕ್ರಮದ ವೇಳೆ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ದೂರು ನೀಡಿವೆ.

ಜಾಗರಣ್‌ ಮಂಚ್‌ ಮತ್ತು ಅಖಿಲ ಭಾರತೀಯ ಹಿಂದೂ ಮಹಾಸಭಾ ನೀಡಿದ ದೂರಿನ ಮೇರೆಗೆ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಕ್ರಮದ ವೇಳೆ ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಮಸೀದಿ ಫೋಟೋ ಹಾಕಲಾಗಿತ್ತು. ಇದು ದೇಶದ ಧ್ವಜಕ್ಕೆ ಅಪಮಾನ ಮಾಡಿದಂತೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಈ ಸಂಬಂಧ ತನಿಖೆ ಕೈಗೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಸ್‌ಪಿ ಬಲೆಂದು ಭೂಷಣ್‌ ಸಿಂಗ್‌ ಹೇಳಿದ್ದಾರೆ.

click me!