
ನವದೆಹಲಿ(ಜ.23): ಫೆಬ್ರವರಿ 1ರಂದು ಮಂಡಿಸಲು ಉದ್ದೇಶಿಸಿರುವ ಕೇಂದ್ರ ಹಣಕಾಸು ಬಜೆಟನ್ನ ಮುಂದೂಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಮಾಡಿದೆ. ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಬಜೆಟ್ ಮುಂದೂಡುವಂತೆ ಕೋರಲಾಗಿತ್ತು. ಆದರೆ, ಬಜೆಟ್`ನಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಅಡ್ವೋಕೇಟ್ ಎಂ.ಎಲ್. ಶರ್ಮಾ ಸಲ್ಲಿಸಿದ್ದ ಪಿಐಎಲ್`ನಲ್ಲಿ 5 ರಾಜ್ಯಗಳ ಚುನಾವಣೆ ಮುಗಿಯುವವರೆಗೂ ಯಾವುದೇ ಪರಿಹಾರ ಕಾರ್ಯಕ್ರಮಗಳನ್ನೂ ಘೋಷಿಸದಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಲು ಕೋರಲಾಗಿತ್ತು. ಪರಿಹಾರ ಕಾರ್ಯಕ್ರಮಗಳನ್ನ ಘೋಷಿಸಿದರೆ ಅದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ವಾದಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.