'ಯುಗಪುರುಷ'ನನ್ನೇ ಕೊಲ್ಲಲು ಹಾಕಿದ್ದಾರೆ ಸ್ಕೆಚ್..!

Published : Mar 24, 2018, 03:31 PM ISTUpdated : Apr 11, 2018, 01:05 PM IST
'ಯುಗಪುರುಷ'ನನ್ನೇ ಕೊಲ್ಲಲು ಹಾಕಿದ್ದಾರೆ ಸ್ಕೆಚ್..!

ಸಾರಾಂಶ

ಸ್ಯಾಂಡಲ್​ವುಡ್‌ನಲ್ಲಿ ಮತ್ತೊಂದು ಸುಪಾರಿ ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ತೆರೆಗೆ ಬಂದ ಯುಗಪುರುಷ ಚಿತ್ರದ ನಾಯಕನ ಕೊಲೆಗೆ ಯತ್ನ ನಡೆದಿದೆ.

ಬೆಂಗಳೂರು: ಸ್ಯಾಂಡಲ್​ವುಡ್‌ನಲ್ಲಿ ಮತ್ತೊಂದು ಸುಪಾರಿ ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ತೆರೆಗೆ ಬಂದ ಯುಗಪುರುಷ ಚಿತ್ರದ ನಾಯಕನ ಕೊಲೆಗೆ ಯತ್ನ ನಡೆದಿದೆ. 

ಯುಗಪುರುಷ ನಾಯಕ ನಟನಾದ ಅರ್ಜುನ್ ದೇವ್‌ನನ್ನು ಕೊಲ್ಲಲು ಸುಪಾರಿ ನೀಡಲಾಗಿದೆ, ಎಂದು ದೇವ್ ಪೊಲೀಸರ ಮೊರೆ ಹೋಗಿದ್ದಾರೆ. ಕಾಶೀಫ್ ಎಂಬಾತ ಸುಪಾರಿ ಪಡೆದಿದ್ದಾನೆಂದು ದೂರು ದಾಖಲಿಸಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಿಸಿರುವ ಅರ್ಜುನ್ ದೇವ್, ಕಾಶೀಫ್ ನನ್ನನ್ನು ಕೊಲ್ಲಲು ನನ್ನ ಮನೆ ಮುಂದೆ ಹೊಂಚು ಹಾಕಿ ಹೋಗಿದ್ದಾನೆ. ನನಗೆ ರಕ್ಷಣೆ ಕೊಡಿ ಅಂತಾ ಪೊಲೀಸರ ಮೊರೆ ಹೋಗಿದ್ದಾರೆ. 

ಚಿತ್ರನಟ ನಾಗಿರುವ ದೇವ್, ಕಾಂಗ್ರೆಸ್ ಘಟಕದ ಅಧ್ಯಕ್ಷರೂ ಹೌದು. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ
ಪ್ರವಾಸಿಗರ ಸ್ವರ್ಗ.. ಅಸ್ಸಾಂ ರಾಜ್ಯ ಯಾವುದಕ್ಕೆ ಪ್ರಸಿದ್ಧ ನಿಮಗೆ ಗೊತ್ತೇ?