ಬಳ್ಳಾರಿಯಿಂದ ಬೆಂಗಳೂರಿಗೆ ಕೇವಲ 999 ರು.ನಲ್ಲಿ ವಿಮಾನದಲ್ಲಿ ಪ್ರಯಾಣಿಸಿ

Published : Feb 26, 2018, 09:31 AM ISTUpdated : Apr 11, 2018, 12:50 PM IST
ಬಳ್ಳಾರಿಯಿಂದ ಬೆಂಗಳೂರಿಗೆ ಕೇವಲ 999 ರು.ನಲ್ಲಿ ವಿಮಾನದಲ್ಲಿ ಪ್ರಯಾಣಿಸಿ

ಸಾರಾಂಶ

ಕೇಂದ್ರ ಸರ್ಕಾರದ ‘ಉಡಾನ್’ ಯೋಜನೆಯಡಿ ಟ್ರೂಜೆಟ್ ವಿಮಾನ ಸಂಸ್ಥೆ ಮಾರ್ಚ್ 1ರಿಂದ ಬಳ್ಳಾರಿ ಯಿಂದ ಬೆಂಗಳೂರಿಗೆ ವಿಮಾನ ಸೇವೆ ಆರಂಭಿಸಲಿದ್ದು, 999ರುಗೆ ಟಿಕೆಟ್ ದರ ನಿಗದಿ ಮಾಡಲಾಗಿದೆ. ‘ಸಂಡೂರು ತಾಲೂಕಿನ ಜಿಂದಾಲ್ (ವಿದ್ಯಾನಗರ) ವಿಮಾನ ನಿಲ್ದಾಣ ದಿಂದ ಬೆಂಗಳೂರಿಗೆ ವಿಮಾನ ಹಾರಾಟ ನಡೆಸಲಿದೆ.

ಬಳ್ಳಾರಿ: ಕೇಂದ್ರ ಸರ್ಕಾರದ ‘ಉಡಾನ್’ ಯೋಜನೆಯಡಿ ಟ್ರೂಜೆಟ್ ವಿಮಾನ ಸಂಸ್ಥೆ ಮಾರ್ಚ್ 1ರಿಂದ ಬಳ್ಳಾರಿ ಯಿಂದ ಬೆಂಗಳೂರಿಗೆ ವಿಮಾನ ಸೇವೆ ಆರಂಭಿಸಲಿದ್ದು, 999ರುಗೆ ಟಿಕೆಟ್ ದರ ನಿಗದಿ ಮಾಡಲಾಗಿದೆ. ‘ಸಂಡೂರು ತಾಲೂಕಿನ ಜಿಂದಾಲ್ (ವಿದ್ಯಾನಗರ) ವಿಮಾನ ನಿಲ್ದಾಣ ದಿಂದ ಬೆಂಗಳೂರಿಗೆ ವಿಮಾನ ಹಾರಾಟ ನಡೆಸಲಿದೆ.

ಉಡಾನ್ ಯೋಜನೆಯಡಿ ಈಗಾಗಲೇ ಬಳ್ಳಾರಿಯಿಂದ ಹೈದರಾದಾಬಾದ್‌ಗೆ ಟ್ರೂಜೆಟ್ ಸಂಸ್ಥೆಯು ವಿಮಾನ ಹಾರಾಟ ನಡೆಸುತ್ತಿದೆ. ಇದೀಗ ಬೆಂಗಳೂರಿಗೆ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.

ಬಳ್ಳಾರಿಯಿಂದ 1 ಗಂಟೆಯಲ್ಲಿ ಬೆಂಗಳೂರು ತಲುಪಬಹುದು’ ಎಂದು ಟ್ರೂಜೆಟ್ ಸಂಸ್ಥೆಯ ಮಾಧ್ಯಮ ಸಂಪರ್ಕ ಅಧಿಕಾರಿ ಸೇಂಥಿಲ್ ರಾಜ್ ತಿಳಿಸಿದ್ದಾರೆ. ‘ಜಿಂದಾಲ್ ವಿಮಾನ ನಿಲ್ದಾಣದಿಂದ ಪ್ರತಿನಿತ್ಯ ಮಧ್ಯಾಹ್ನ 2 ಗಂಟೆಗೆ ವಿಮಾನ ಹೊರಡಲಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಬರಲು ಅಲ್ಲಿಂದ ಮಧ್ಯಾಹ್ನ 3.30ಕ್ಕೆ ವಿಮಾನ ಸೌಲಭ್ಯವಿದೆ’ ಎಂದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 20 ಲಕ್ಷ ಅಕ್ರಮ ವಲಸಿಗರು? ಪೊಲೀಸರ ಲೆಕ್ಕದಲ್ಲಿ ಕೇವಲ 485 ಮಂದಿ!
india Latest News Live: ನ್ಯಾಷನಲ್‌ ಹೆರಾಲ್ಡ್ ಕೇಸು: ಹೈಕೋರ್ಟ್‌ ಮೊರೆ ಹೋದ ಜಾರಿ ನಿರ್ದೇಶನಾಲಯ