
ಪಣಜಿ (ಡಿ.15): ಕರ್ನಾಟಕ-ಗೋವಾ ಗಡಿಯಲ್ಲಿರುವ ಜನಪ್ರಿಯ ಪ್ರವಾಸಿ ತಾಣ ದೂಧಸಾಗರ ಜಲಪಾತಕ್ಕೆ ತೆರಳಲು ಪ್ರವಾಸಿಗರಿಗೆ ಜೀಪ್’ಗಳನ್ನು ಪಡೆಯಲು ಆನ್ಲೈನ್ ಬುಕ್ಕಿಂಗ್ ಸೇವೆ ಒದಗಿಸಲು ಗೋವಾ ಸರ್ಕಾರ ಚಿಂತನೆ ನಡೆಸುತ್ತಿದೆ. ಗೋವಾ-ಕರ್ನಾಟಕ ಗಡಿಯಲ್ಲಿರುವ ಈ ಜಲಪಾತಕ್ಕೆ ಪ್ರತಿದಿನ 2,500-3,000 ಪ್ರವಾಸಿಗರು ಭೇಟಿ ನೀಡುತ್ತಾರೆ.
ಜಲಪಾತಕ್ಕೆ ಆಗಮಿಸುವ ಪ್ರವಾಸಿಗರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತಂತೆ ಭಾನುವಾರ ನಡೆಯಲಿರುವ ಸಭೆಯಲ್ಲಿ ಗೋವಾ ವನ್ಯಜೀವಿ ಮಂಡಳಿ ಚರ್ಚಿಸಲಿದೆ. ಆನ್ಲೈನ್ ಬುಕ್ಕಿಂಗ್ ಮೂಲಕ ಜೀಪ್ ಬುಕ್ ಮಾಡಿ ದೂಧಸಾಗರಕ್ಕೆ ಕಳಿಸಿ ಪ್ರವಾಸಿಗರಿಗೆ ಆಗುವ ಅನಾನುಕೂಲ ತಪ್ಪಿಸಲು ಚಿಂತನೆ ನಡೆಯುತ್ತಿದೆ ಎಂದು ಸಿಎಂ ಮನೋಹರ್ ಪರ್ರಿಕರ್ ಗುರುವಾರ ತಿಳಿಸಿದ್ದಾರೆ.
ಶಾಸಕರೊಬ್ಬರ ಪ್ರಶ್ನೆಗೆ ಅವರು ಈ ಮಾಹಿತಿ ನೀಡಿದ್ದಾರೆ. ದೂಧಸಾಗರಕ್ಕೆ ಹೋಗುವ ಮಾರ್ಗ ಸಂರಕ್ಷಿತ ಅರಣ್ಯದ ಮೂಲಕ ಸಾಗುತ್ತಿದ್ದು, ತೀರಾ ಕಡಿದಾಗಿದೆ. 431 ಜೀಪ್’ಗಳು ಇಲ್ಲಿ ಸಂಚರಿಸುತ್ತವೆ. ದೂಧಸಾಗರ ಪಕ್ಕವೇ ವಾಸ್ಕೋ-ಲೋಂಡಾ ರೈಲು ಮಾರ್ಗ ಹಾದು ಹೋಗುತ್ತದೆ. ಆದರೆ ರೈಲು ಹಳಿಗುಂಟ ನಡೆದುಕೊಂಡು ಹೋಗುವುದು ನಿಷೇಧವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.