
ಮುಂಬೈ,[ಜೂ.24] ಮಹಾರಾಷ್ಟ್ರ ಸರಕಾರ ಪರಿಸರ ಉಳಿವಿಗೆ ದಿಟ್ಟ ನಿರ್ಧಾರ ತೆಗೆದುಕೊಂಡು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಜೂನ್ 23 ಅಂದರೆ ನಿನ್ನೆಯಿಂದ ಜಾರಿಯಾದ ಆದೇಶಕ್ಕೆ ಪರ-ವಿರೋಧ ಏನೇ ಇದ್ದರೂ ಭರಪೂರ ದಂಡ ಮಾತ್ರ ಸಂಗ್ರಹವಾಗಿದೆ.
ಆದೇಶ ಜಾರಿಯಾದ ಮೇಲೆ ಮೊದಲ ಸಾರಿ ಪ್ಲಾಸ್ಟಿಕ್ ಬಳಸಿದರೆ 5 ಸಾವಿರ ದಂಡ ಹಾಕಲು ಆದೇಶ ಕಟ್ಟುನಿಟ್ಟಾಗಿ ಹೇಳಿತ್ತು. ಅದರಂತೆ ಕೇವಲ ಒಂದೇ ಒಂದು ದಿನದಲ್ಲಿ ಮುಂಬೈ ಮಹಾನಗರ ಪಾಲಿಕೆ ಬರೋಬ್ಬರಿ 3.35 ಲಕ್ಷ ರೂ. ದಂಡ ಮತ್ತು 591 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ.
ಯಾವ ಬಗೆಯ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಲು ಸಾಧ್ಯವಿಲ್ಲವೋ ಅಥವಾ ಮರು ಬಳಕೆ ಮಾಡಲು ಸಾಧ್ಯವಿಲ್ಲವೋ ಅಂಥ ಪ್ಲಾಸ್ಟಿಕ್ ಗೆ ನಿಷೇಧ ಹೇರುತ್ತಿದ್ದೇವೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸ್ಪಷ್ಟಪಡಿಸಿದ್ದರು. ಅಲ್ಲದೇ ಬಾಲಿವುಡ್ ನಟ-ನಟಿಯರು ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು ಎಂದು ಸಾಮಾಜಿಕ ತಾಣದಲ್ಲಿ ಮನವಿ ಮಾಡಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.