ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ: ಸಹಕಾರಕ್ಕೆ ಮೋದಿ ಮನವಿ

Published : Jun 16, 2019, 03:10 PM IST
ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ: ಸಹಕಾರಕ್ಕೆ ಮೋದಿ ಮನವಿ

ಸಾರಾಂಶ

ನಾಳೆ(ಜೂ.17)ಯಿಂದ 17 ನೇ ಲೋಕಸಭೆಯ ಮೊದಲ ಅಧಿವೇಶನ| ಜೂ.16ರಿಂದ ಜುಲೈ .26ರವರೆಗೆ ಸಂಸತ್ ಕಲಾಪ್| ಪ್ರಧಾನಿ ಮೋದಿ ನೇತೃತತ್ವದಲ್ಲಿ ಇಂದು ಸರ್ವಪಕ್ಷ ಸಭೆ| ಸುಗಮ ಅಧಿವೇಶನಕ್ಕಾಗಿ ಪ್ರತಿಪಕ್ಷಗಳ ಸಹಕಾರ ಕೋರಿದ ಪ್ರಧಾನಿ| 

ನವದೆಹಲಿ(ಜೂ.16): ನಾಳೆ(ಜೂ.17)ಯಿಂದ ಆರಂಭವಾಗಲಿರುವ 17 ನೇ ಲೋಕಸಭೆಯ ಮೊದಲ ಅಧಿವೇಶನದ ಹಿನ್ನೆಲೆಯಲ್ಲಿ, ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತತ್ವದಲ್ಲಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. 

ಎರಡನೇ ಬಾರಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಸರ್ವಪಕ್ಷ ಸಭೆಯ ನೇತೃತ್ವವಹಿಸಿರುವ ಮೋದಿ, ಸುಗಮ ಅಧಿವೇಶನಕ್ಕಾಗಿ ಪ್ರತಿಪಕ್ಷಗಳ ಸಹಕಾರ ಕೋರಿದರು.

ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ, ರಾಜ್ಯಸಭೆಯ ಬಿಜೆಪಿ ನಾಯಕ ಥಾವರ್ ಚಂದ್ ಗೆಹ್ಲೋಟ್,  ಸಮಾಜವಾದಿ ಪಕ್ಷದ ಮುಖಂಡರಾದ ರಾಮ್ ಗೋಪಾಲ್ ಯಾದವ್, ಟಿಎಂಸಿಯ ಡೆರೆಕ್ ಒ'ಬ್ರಿಯೆನ್, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಫಾರೂಖ್ ಅಬ್ದುಲ್ಲಾ, ಎನ್ ಸಿಪಿಯ ಸುಪ್ರಿಯಾ ಸುಳೆ, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಮತ್ತಿತರರರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

17 ನೇ ಲೋಕಸಭೆಯ ಪ್ರಥಮ ಅಧಿವೇಶನ ನಾಳೆಯಿಂದ ಜುಲೈ. 26ರವರೆಗೆ ನಡೆಯಲಿದೆ. ಜುಲೈ 5 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಬಜೆಟ್ ಮಂಡಿಸಲಿದ್ದಾರೆ. ಅಧಿವೇಶದ ಮೊದಲ ಎರಡು ದಿನ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 19 ರಂದು 17ನೇ ಲೋಕಸಭೆಯ ಸ್ಪೀಕರ್ ಹುದ್ದೆಗಾಗಿ ಚುನಾವಣೆ ನಡೆಯಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು