
ಲಾಹೋರ್(ಸೆ.03): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಭಾರತದ ವಿರುದ್ಧ ಕತ್ತಿ ಮಸೆಯುತ್ತಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೊನೆಗೂ ಮೆತ್ತಗಾಗಿದ್ದಾರೆ.
ಯಾವುದೇ ಕಾರಣಕ್ಕೂ ಪಾಕಿಸ್ತಾನ ಭಾರತದೊಂದಿಗೆ ಯುದ್ಧ ಆರಂಭಿಸುವುದಿಲ್ಲ ಎಂದು ಹೇಳಿರುವ ಇಮ್ರಾನ್, ಯಾವುದೇ ಸಮಸ್ಯೆಗೆ ಯುದ್ಧ ಪರಿಹಾರವಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಇಲ್ಲಿನ ಗೌರ್ವನರ್ ಹೌಸ್'ನಲ್ಲಿ ಸಿಖ್ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಇಮ್ರಾನ್, ಭಾರತ ಹಾಗೂ ಪಾಕಿಸ್ತಾನ ಪರಮಾಣು ಶಕ್ತಿ ಹೊಂದಿರುವ ರಾಷ್ಟ್ರಗಳಾಗಿದ್ದು ಪರಿಸ್ಥಿತಿ ಕೈಮೀರಿದರೆ ವಿಶ್ವವೇ ಅಪಾಯಕ್ಕೆ ಸಿಲುಕಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಯಾವುದೇ ಸಮಸ್ಯೆಗೆ ಯುದ್ಧ ಪರಿಹಾರವಲ್ಲ, ಯುದ್ದದಿಂದ ಗೆದ್ದವರು, ಸೋತವರು ಇಬ್ಬರು ಕಳೆದುಕೊಳ್ಳುತ್ತಾರೆ. ಯುದ್ದದಿಂದ ಇನ್ನಿತರ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ ಎಂದು ಇಮ್ರಾನ್ ಪ್ರವಾದಿಯಂತೆ ಮಾತನಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಈ ಹಿಂದಿನ ದೂರವಾಣಿ ಸಂಭಾಷಣೆಯನ್ನು ನೆನೆದ ಇಮ್ರಾನ್ ಖಾನ್, ಭಾರತ ಹಾಗೂ ಪಾಕಿಸ್ತಾನದ ನಡುವಣ ಪರಿಸ್ಥಿತಿಯನ್ನು ಬದಲಾವಣೆ ಮಾಡಬೇಕಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.