
ನವದೆಹಲಿ: ಬಿಹಾರದ ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ರೂ.500 ಕೋಟಿ ತುರ್ತು ಪರಿಹಾರವನ್ನು ಘೋಷಿಸಿದ್ದಾರೆ.
ಈ ಪರಿಹಾರ ಮೊತ್ತದ ಹೊರತಾಗಿ, ನೆರೆ ಸಂತ್ರಸ್ತ ಕುಟುಂಬಗಳಿಗೆ ತಲಾ ರೂ. 2 ಲಕ್ಷ ನೆರವನ್ನು ಕೂಡಾ ಘೋಷಿಸಿದ್ದಾರೆ ಎ ಂದು ಪ್ರಧಾನಿ ಕಚೇರಿಯು ತಿಳಿಸಿದೆ.
ನೆರೆಯಿಂದ ಸಂಭವಿಸಿರುವ ಹಾನಿಯ ವಿವರವಾದ ಸಮೀಕ್ಷೆ ನಡೆಸಲು ತಂಡವನ್ನು ಶೀಘ್ರದಲ್ಲೇ ಕಳುಹಿಸಲಾಗುವುದೆಂದು ಹೇಳಲಾಗಿದೆ.
ಬೆಳೆ ಹಾನಿಯಿಂದ ರೈತರಿಗಾಗಿರುವ ನಷ್ಟವನ್ನು ಆದಷ್ಟು ಬೇಗ ಭರಿಸುವಂತಾಗಲು ವಿಮಾ ಕಂಪನಿಗಳು ತಮ್ಮ ಸಿಬ್ಬಂದಿಯನ್ನು ತಕ್ಷಣ ಕಳುಹಿಸಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ.
ಬಿಹಾರಕ್ಕೆ ಗರಿಷ್ಠ ನೆರವನ್ನೊದಗಿಸುವುದಾಗಿವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ಸುರಿಯುತ್ತಿರುವ ಸತತ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಬಿಹಾರದ ಸುಮಾರು 19 ಜಿಲ್ಲೆಗಳು ನೆರೆಯಿಂದ ಪೀಡಿತವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.