
ನವದೆಹಲಿ(ನ.07): ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ಅಂತಿಮ ತೀರ್ಪು ಹೊರಬೀಳಲು ಕ್ಷಣಗಣನೆ ಶುರುವಾಗಿದೆ. ಈ ಮಧ್ಯೆ ತೀರ್ಪಿಗೂ ಮೊದಲೇ ಯಾವುದೇ ರೀತಿಯ ಅನಗತ್ಯ ಹೇಳಿಕೆಗೆ ಮುಂದಾಗದಂತೆ ಪ್ರಧಾನಿ ಮೋದಿ ಸ್ವಪಕ್ಷೀಯ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.
ಕೊನೆಗೂ ಮುಗೀತು ವಿಚಾರಣೆ: ಅಯೋಧ್ಯೆ ತೀರ್ಪಿಗೆ ದಿನಗಣನೆ!
ದೇಶದಲ್ಲಿ ಸೌಹಾರ್ದತೆ ಹಾಗೂ ಸಾಮರಸ್ಯದ ವಾತಾವರಣ ಕಾಪಾಡುವ ಅಗತ್ಯವಿದ್ದು, ಅಯೋಧ್ಯೆ ವಿವಾದ ಸಂಬಂಧ ಅನಗತ್ಯ ಹೇಳಿಕೆಗಳನ್ನು ನೀಡದಿರಿ ಎಂದು ಕೇಂದ್ರ ಸಚಿವರೂ ಸೇರಿದಂತೆ ಬಿಜೆಪಿ ನಾಯಕರಿಗೆ ಮೋದಿ ಸೂಚಿಸಿದ್ದಾರೆ.
ಡಿಸೆಂಬರ್ 6ರಿಂದ ಮಂದಿರ ನಿರ್ಮಾಣ ಶುರು: ಸಾಕ್ಷಿ ಮಹಾರಾಜ್ ಭವಿಷ್ಯ ನುಡಿದರು!
ಅಯೋಧ್ಯೆ ತೀರ್ಪಿಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ, ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡದಿರುವಂತೆ ಸ್ಪಷ್ಟ ಸುಚನೆ ನೀಡಿದ್ದಾರೆ.
ಅಲ್ಲದೇ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಯಾವುದೇ ರೀತಿಯ ತೀರ್ಪು ನೀಡಿದರೂ, ಅದನ್ನು ಸೋಲು ಅಥವಾ ವಿಜಯದ ದೃಷ್ಟಿಯಿಂದ ನೋಡದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
'ಅಯೋಧ್ಯೆ ಬಗ್ಗೆ ಮಾತು ಆಡುವಾಗ ಹುಷಾರ್' ಸಚಿವರಿಗೆ ಸಿಎಂ ವಾರ್ನಿಂಗ್
ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಮೋದಿ ಸಭೆಯಲ್ಲಿ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.