ಸಂಪುಟಕ್ಕೆ ಯಾರ‍್ಯಾರು?: ಮೋದಿ- ಅಮಿತ್‌ ಶಾ ಚರ್ಚೆ

Published : May 29, 2019, 08:02 AM ISTUpdated : May 29, 2019, 08:15 AM IST
ಸಂಪುಟಕ್ಕೆ ಯಾರ‍್ಯಾರು?: ಮೋದಿ- ಅಮಿತ್‌ ಶಾ ಚರ್ಚೆ

ಸಾರಾಂಶ

ಸಂಪುಟಕ್ಕೆ ಯಾರ‍್ಯಾರು?: ಮೋದಿ- ಅಮಿತ್‌ ಶಾ ಚರ್ಚೆ| ಹಿರಿಯರಿಗೆ ಮತ್ತೆ ಮಣೆ| ಜೇಟ್ಲಿಗಿಲ್ಲ ಹುದ್ದೆ| ಬಂಪರ್‌ ಸ್ಥಾನ ಕೊಟ್ಟವರಿಗೆ?

ನವದೆಹಲಿ[ಮೇ.29]: ಮೇ 30 ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಯಾರಾರ‍ಯರಿಗೆ ಸಚಿವ ಸ್ಥಾನ ನೀಡಬೇಕು ಎಂಬುದ ಕುರಿತು ಮಂಗಳವಾರ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮತ್ತು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಏನೇನಾಯ್ತು ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ, ಯಾವ ಪಕ್ಷಗಳಿಗೆ ಎಷ್ಟುಸಚಿವ ಸ್ಥಾನ ನೀಡಬೇಕು, ಯಾರಾರ‍ಯರಿಗೆಲ್ಲಿ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂಬ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.

ಹಿರಿಯರಿಗೆ ಮತ್ತೆ ಮಣೆ

ಕಳೆದ ಸರ್ಕಾರದಲ್ಲಿ ಸಚಿವರಾಗಿದ್ದ ರಾಜ್‌ನಾಥ್‌, ಗಡ್ಕರಿ, ನಿರ್ಮಲಾ ಸೀತಾರಾಮನ್‌, ರವಿಶಂಕರ್‌ ಪ್ರಸಾದ್‌, ಪಿಯೂಷ್‌ ಗೋಯಲ್‌, ನರೇಂದ್ರಸಿಂಗ್‌ ತೋಮರ್‌, ಪ್ರಕಾಶ್‌ ಜಾವಡೇಕರ್‌ ಸೇರಿದಂತೆ ಹಲವು ಹಿರಿಯ ನಾಯಕರಿಗೆ ಮತ್ತೆ ಸಚಿವ ಸ್ಥಾನ ಕಲ್ಪಿಸುವುದು ಬಹುತೇಕ ಖಚಿತವಾಗಿದೆ.

ಜೇಟ್ಲಿಗಿಲ್ಲ ಹುದ್ದೆ

ಅನಾರೋಗ್ಯದಿಂದ ಬಳಲುತ್ತಿರುವ ಅರುಣ್‌ ಜೇಟ್ಲಿ, ಸ್ವತಃ ತಾವೇ ಸಂಪುಟದಿಂದ ಹೊರಗುಳಿಯುವುದಾಗಿ ಪಕ್ಷದ ನಾಯಕರಿಗೆ ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ, ಅವರು ನೂತನ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಸುಷ್ಮಾ ಕುತೂಹಲ

ವಯಸ್ಸಿನ ಕಾರಣ ನೀಡಿ, ಸುಷ್ಮಾ ಸ್ವರಾಜ್‌ ಈ ಬಾರಿ ಲೋಕಸಭೆಗೆ ಸ್ಪರ್ಧಿಸಿರಲಿಲ್ಲ. ಆದರೆ ಹಿಂದಿನ ಸಂಪುಟದ ಅತ್ಯಂತ ಜನಪ್ರಿಯ ಸಚಿವರ ಪೈಕಿ ಸುಷ್ಮಾ ಕೂಡಾ ಒಬ್ಬರು. ಆದರೆ ಅವರನ್ನು ಸಚಿವರಾಗಿ ಆಯ್ಕೆ ಮಾಡಿದರೆ, ಅವರನ್ನು 6 ತಿಂಗಳಲ್ಲಿ ರಾಜ್ಯಸಭೆಗೆ ಆಯ್ಕೆ ಮಾಡಬೇಕು. ಹೀಗಾಗಿ ಸುಷ್ಮಾ ಸಂಪುಟ ಸೇರ್ಪಡೆ ಬಗ್ಗೆ ಇನ್ನೂ ಕುತೂಹಲ ಹಾಗೆಯೇ ಇದೆ.

ಪಕ್ಷಗಳಿಗೆ ಎಷ್ಟೆಷ್ಟು?

ಶಿವಸೇನೆ ಮತ್ತು ಜೆಡಿಯು ತಲಾ 2, ಶಿರೋಮಣಿ ಅಕಾಲಿದಳ, ಎಐಎಡಿಎಂಕೆ, ಎಲ್‌ಜೆಪಿಗೆ ತಲಾ ಒಂದು ಸ್ಥಾನ ನೀಡಲಾಗುವುದು ಎನ್ನಲಾಗಿದೆ.

ಬಂಪರ್‌ ಸ್ಥಾನ ಕೊಟ್ಟವರಿಗೆ?

ಈ ಬಾರಿ ಪಕ್ಷಕ್ಕೆ ಭಾರೀ ಸ್ಥಾನ ಗೆದ್ದುಕೊಟ್ಟಯುಪಿ, ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢಕ್ಕೆ ಹೆಚ್ಚಿನ ಸ್ಥಾನ ಕಲ್ಪಿಸಲು ನಿರ್ಧರಿಸಲಾಗಿದೆ. ಇನ್ನು ರಾಜಕೀಯ ಕಾರಣಗಳಿಗಾಗಿ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತೆಲಂಗಾಣ ರಾಜ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು