
ಥಿಂಪು(ಆ.18): ಭಾರತ ಮತ್ತು ಭೂತಾನ್ ರಾಷ್ಟ್ರಗಳು ಶತಶತಮಾನದಿಂದ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಬಂಧವನ್ನು ವಿನಿಮಯ ಮಾಡುತ್ತಿದ್ದು, ಇದು ಈಗಲೂ ಮುಂದುವರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡು ದಿನಗಳ ಭೂತಾನ್ ಪ್ರವಾಸದಲ್ಲಿದ್ದ ಪ್ರಧಾನಿ, ರಾಜಧಾನಿ ಥಿಂಪುವಿನಲ್ಲಿರುವ ರಾಯಲ್ ವಿವಿಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಭಾರತ ಮತ್ತು ಭೂತಾನ್ ನಡುವಿನ ಶೈಕ್ಷಣಿಕ ಸಂಬಂಧಕ್ಕೆ ತನ್ನದೇ ಆದ ಇತಿಹಾಸವಿದ್ದು, ಎರಡೂ ದೇಶಗಳ ಪ್ರಧಾನ ಶಿಕ್ಷಣ ಸಂಸ್ಥೆಗಳ ನಡುವೆ ಆಳವಾದ ಸಹಯೋಗ ಬೆಳೆಸುವ ಮೂಲಕ ಇದನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಮೋದಿ ನುಡಿದರು.
ಭೂತಾನ್ ಯುವಕರು ತಮ್ಮ ಕನಸನ್ನು ಸಾಕಾರಗೊಳಿಸುವ ಕ್ಷಮತೆ ಹೊಂದಿದ್ದು, ಭಾರತದೊಂದಿಗಿನ ಶೈಕ್ಷಣಿಕ ಸಹಯೋಗ ಈ ಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಬೇಕಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.
ಇನ್ನು ತಮ್ಮ ಎರಡು ದಿನಗಳ ಭೂತಾನ್ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಸ್ವದೇಶಕ್ಕೆ ಮರಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.