ಮುಸ್ಲಿಮರಿಗಾಗಿ ಕೆಲಸ ಮಾಡಿ: ಪಕ್ಷದ ನಾಯಕರಿಗೆ ಪ್ರಧಾನಿ ಮೋದಿ ಕರೆ

Published : Apr 15, 2017, 09:38 PM ISTUpdated : Apr 11, 2018, 12:58 PM IST
ಮುಸ್ಲಿಮರಿಗಾಗಿ ಕೆಲಸ ಮಾಡಿ: ಪಕ್ಷದ ನಾಯಕರಿಗೆ ಪ್ರಧಾನಿ ಮೋದಿ ಕರೆ

ಸಾರಾಂಶ

ಮುಸ್ಲಿಮರಲ್ಲೂ ಹಿಂದುಳಿದ ವರ್ಗಗಳಿವೆ, ಅವರು ಅತೀ ಹೆಚ್ಚು ಹಿಂದುಳಿದವರಾಗಿದ್ದಾರೆ. ಅಭಿವೃದ್ಧಿಯ ಫಲವನ್ನು ಅವರ ಬಳಿ ಕೊಂಡೊಯ್ಯುವುದು ಬಿಜೆಪಿಯ ಹೊಣೆಗಾರಿಕೆಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಭುವನೇಶ್ವರ (ಏ. 16): ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದುಳಿದ ಮುಸ್ಲಿಮರಿಗಾಗಿ ಕೆಲಸ ಮಾಡುವಂತೆ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ.

ಭುವನೇಶ್ವರದಲ್ಲಿ ನಿನ್ನೆ ಆರಂಭವಾದ ಕಾರ್ಯಕಾರಿಣಿಯಲ್ಲಿ ಬಿಜೆಪಿ ಮುಖ್ಯಮಂತ್ರಿಗಳು, 45 ಮಂದಿ ಕೇಂದ್ರ ಸಚಿವರು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಪಕ್ಷದ ನಾಯಕರು ಭಾಗಿಯಾಗಿದ್ದಾರೆ.

ಮುಸ್ಲಿಮರಲ್ಲೂ ಹಿಂದುಳಿದ ವರ್ಗಗಳಿವೆ, ಅವರು ಅತೀ ಹೆಚ್ಚು ಹಿಂದುಳಿದವರಾಗಿದ್ದಾರೆ. ಅಭಿವೃದ್ಧಿಯ ಫಲವನ್ನು ಅವರ ಬಳಿ ಕೊಂಡೊಯ್ಯುವುದು ಬಿಜೆಪಿಯ ಹೊಣೆಗಾರಿಕೆಯಾಗಿದೆ ಎಂದು ಮೋದಿ ಹೇಳಿದ್ದಾರೆ.

ತ್ರಿವಳಿ ತಲಾಖ್ ಪದ್ದತಿಯಿಂದ ಮುಸ್ಲಿಮ್ ಮಹಿಳೆಯರು ಕಷ್ಟವನ್ನನುಭವಿಸುತ್ತಿದ್ದಾರೆ, ನಾವು ಅದಕ್ಕೂ ಪರಿಹಾರ ಕಂಡುಕೊಳ್ಳವ ಆಗತ್ಯವಿದೆಯೆಂದು ಪ್ರಧಾನಿ ಮೋದಿ ಈ ಸಂದರ್ಭ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಇವಿಎಂ ಬಳಕೆಗೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಪ್ರಧಾನಿ ಮೋದಿ ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌