ಸಚಿವರಿಗೆ ಮೋದಿ ರಿಯಾಲಿಟಿ ಚೆಕ್

Published : Feb 12, 2017, 08:40 PM ISTUpdated : Apr 11, 2018, 01:12 PM IST
ಸಚಿವರಿಗೆ ಮೋದಿ ರಿಯಾಲಿಟಿ ಚೆಕ್

ಸಾರಾಂಶ

ಸಚಿವರು ತಮ್ಮ ಕ್ಷೇತ್ರದಿಂದಾಚೆಗೂ ಭೇಟಿ ನೀಡಿ, ಸರ್ಕಾರ ಯೋಜನೆಗಳು ಅದರಲ್ಲೂ ವಿಶೇಷವಾಗಿ ಅಪನಗದೀಕರಣ ಕುರಿತು ಜಾಗೃತಿ ಮೂಡಿಸಿದ್ದಾರಾ? ಎಂಬುದನ್ನು ಅರಿಯುವ ಕ್ರಮ ಇದಾಗಿದೆ ಎಂದು ಹೇಳಲಾಗಿದೆ.

ನವದೆಹಲಿ(ಫೆ.13): ದೇಶದ ವಿವಿಧ ಭಾಗಕ್ಕೆ ತೆರಳಿ ಅಪನಗದೀಕರಣದ ಪ್ರಯೋಜನ ಕುರಿತು ಜಾಗೃತಿ ಮೂಡಿಸುವಂತೆ ನೀಡಲಾಗಿದ್ದ ಸೂಚನೆಯನ್ನು ಸಚಿವರು ಪಾಲಿಸಿದ್ದಾರೆಯೇ? ಇಲ್ಲವೇ? ಎಂಬುದನ್ನು ಪತ್ತೆ ಹಚ್ಚಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಹೀಗಾಗಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಕೈಗೊಂಡ ಪ್ರವಾಸ ವಿವರಗಳನ್ನು ಸೋಮವಾರದೊಳಗೆ ನೀಡುವಂತೆ ಕೇಂದ್ರ ಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನೋಟು ರದ್ದತಿ ಹಾಗೂ ಕೇಂದ್ರ ಸರ್ಕಾರದ ಮತ್ತಿತರೆ ಕ್ರಮಗಳ ಕುರಿತಾದ ಕಾರ್ಯಕ್ರಮಗಳಲ್ಲಿ ಸಚಿವರು ಭಾಗಿಯಾಗಿದ್ದಾರೆಯೇ ಎಂಬುದನ್ನು ತಿಳಿಯುವ ಉದ್ದೇಶ ಪ್ರಧಾನಿಯವರದ್ದಾಗಿದೆ. ಹಾಗಾಗಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಪ್ರವಾಸ ವಿವರ ಕೇಳಲಾಗಿದೆ. ಈ ವಿಚಾರದಲ್ಲಿ ಸಮನ್ವಯ ಸಾಧಿಸುವ ಹೊಣೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರಿಗೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಲ ಸಚಿವರು ಮೂರು ತಿಂಗಳ ಅವಧಿಯಲ್ಲಿನ ತಮ್ಮ ಪ್ರವಾಸ ವಿವರವನ್ನು ಒದಗಿಸಬೇಕು. ಒಂದು ವೇಳೆ ಯಾವುದೇ ರಾಜ್ಯಕ್ಕೂ ತೆರಳಿಲ್ಲ ಎಂದಾದರೆ, ದೆಹಲಿಯಲ್ಲೇ ಇದ್ದು, ಕಚೇರಿಗೆ ಹಾಜರಾದ ಕುರಿತು ಮಾಹಿತಿ ಒದಗಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.

ಸಚಿವರು ತಮ್ಮ ಕ್ಷೇತ್ರದಿಂದಾಚೆಗೂ ಭೇಟಿ ನೀಡಿ, ಸರ್ಕಾರ ಯೋಜನೆಗಳು ಅದರಲ್ಲೂ ವಿಶೇಷವಾಗಿ ಅಪನಗದೀಕರಣ ಕುರಿತು ಜಾಗೃತಿ ಮೂಡಿಸಿದ್ದಾರಾ? ಎಂಬುದನ್ನು ಅರಿಯುವ ಕ್ರಮ ಇದಾಗಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಬೋಡಿಯಾದ 30 ಅಡಿಯ ವಿಷ್ಣು ಪ್ರತಿಮೆ ಥಾಯ್ಲೆಂಡಿಂದ ಧ್ವಂಸ
ನೈಸ್‌ ವಿರುದ್ಧ ಇಳಿವಯಸ್ಸಲ್ಲೂ ಕಾನೂನು ಹೋರಾಟ: ಗೌಡ