ತುರ್ತು ಪರಿಸ್ಥಿತಿ ನೆನೆದ ಪ್ರಧಾನಿ: ಸದನದಲ್ಲಿ ಕಾಂಗ್ರೆಸ್ ಮೌನಿ!

Published : Jun 25, 2019, 07:30 PM IST
ತುರ್ತು ಪರಿಸ್ಥಿತಿ ನೆನೆದ ಪ್ರಧಾನಿ: ಸದನದಲ್ಲಿ ಕಾಂಗ್ರೆಸ್ ಮೌನಿ!

ಸಾರಾಂಶ

ಕರಾಳ ತುರ್ತು ಪರಿಸರ್ತಿತಿ ಹೇರಿ ಇಂದಿಗೆ 39 ವರ್ಷಗಳು| ದೇಶ ಆ ಭಯನಾಕ ಸ್ಥಿತಿಯನ್ನು ಮರೆತಿಲ್ಲ ಎಂದ ಪ್ರಧಾನಿ| ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ| ತುರ್ತು ಪರಿಸ್ಥಿತಿ ನೆನೆದು ಕಾಂಗ್ರೆಸ್ ಚುಚ್ಚಿದ ಮೋದಿ| ‘ತುರ್ತು ಪರಿಸ್ಥಿತಿ ಹೇರಿದವರಿಂದ ಪ್ರಜಾಪ್ರಭುತ್ವದ ಪಾಠ ಹೇಳಿಸಿಕೊಳ್ಳಬೇಕಿಲ್ಲ’| ‘ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಸರ್ಕಾರ ಅಸ್ತಿತ್ವದಲ್ಲಿದೆ'

ನವದೆಹಲಿ(ಜೂ.25): ದೇಶದಲ್ಲಿ ಕರಾಳ ತುರ್ತು ಪರಿಸರ್ತಿತಿ ಹೇರಿ ಇಂದಿಗೆ 39 ವರ್ಷಗಳು ಉರುಳಿದ್ದು, ದೇಶ ಆ ಭಯನಾಕ ಸ್ಥಿತಿಯನ್ನು ಮರೆತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ  ಮಾತನಾಡಿದ ಪ್ರಧಾನಿ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದವರಿಂದ ನಾವು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದು ಗುಡುಗಿದರು.

ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲೆ ನಡೆಸಿದ ಭೀಕರ ಹಲ್ಲೆಯಾಗಿದ್ದು, ಇದನ್ನು ದೇಶ ಅತ್ಯಂತ ಧೈರ್ಯದಿಂದ ಎದುರಿಸಿತ್ತು ಎಂದು ಮೋದಿ ಹೇಳಿದರು.

ಆದರೆ ಇಂದು ಪರಿಸ್ಥಿತಿ ಬದಲಾಗಿದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ, ಬಲಗೊಳಿಸುವ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಪ್ರಧಾನಿ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ