ಬಂದ್​ಗೆ ಕರೆ ನೀಡಿದವರಿಗೆ ಪ್ರಧಾನಿ ಚಾಟಿ

Published : Nov 27, 2016, 02:27 PM ISTUpdated : Apr 11, 2018, 12:36 PM IST
ಬಂದ್​ಗೆ ಕರೆ ನೀಡಿದವರಿಗೆ ಪ್ರಧಾನಿ ಚಾಟಿ

ಸಾರಾಂಶ

ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದ ಬಿಜೆಪಿ 'ಪರಿವರ್ತನ್‌ ಯಾತ್ರಾ ರ‍್ಯಾಲಿ'ಯಲ್ಲಿ ಮಾತನಾಡಿದ ಮೋದಿ, ‘ಕಪ್ಪು ಹಣ, ಭ್ರಷ್ಟಾಚಾರಕ್ಕೆ ನಾನು ತಡೆ ಒಡ್ಡಿದ್ದೇನೆ, ಕೆಲವರು ಭಾರತ್‌ ಬಂದ್‌ಗೆ ಕರೆ ನೀಡಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಚಾಟಿ ಬೀಸಿದ್ದಾರೆ.

ಖುಷಿನಗರ, ಉತ್ತರ ಪ್ರದೇಶ (ನ.27): ನೋಟ್‌ ನಿಷೇಧ ಕ್ರಮ ವಿರೋಧಿಸಿ ನಾಳೆ ಬಂದ್‌ಗೆ ಕರೆ ನೀಡಿರುವ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಕಪ್ಪು ಹಣದ ಹಾದಿಯನ್ನು ಬಂದ್‌ ಮಾಡಬೇಕೇ ಅಥವಾ ಭಾರತ್‌ ಬಂದ್‌ ಮಾಡಬೇಕೇ ಎಂದು ಮೋದಿ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದ ಬಿಜೆಪಿ 'ಪರಿವರ್ತನ್‌ ಯಾತ್ರಾ ರ‍್ಯಾಲಿ'ಯಲ್ಲಿ ಮಾತನಾಡಿದ ಮೋದಿ, ‘ಕಪ್ಪು ಹಣ, ಭ್ರಷ್ಟಾಚಾರಕ್ಕೆ ನಾನು ತಡೆ ಒಡ್ಡಿದ್ದೇನೆ, ಕೆಲವರು ಭಾರತ್‌ ಬಂದ್‌ಗೆ ಕರೆ ನೀಡಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಚಾಟಿ ಬೀಸಿದ್ದಾರೆ.

ಯಾವುದೇ ಪಕ್ಷದ ಹೆಸರು ಪ್ರಸ್ತಾಪಿಸದ ಮೋದಿ, 'ಭ್ರಷ್ಟಾಚಾರವನ್ನು ಮಟ್ಟಹಾಕಲು ನಾವು ಪ್ರಯತ್ನಿಸುತ್ತಿದ್ದೇವೆ, ಅವರು ಭಾರತ್‌ ಬಂದ್‌ಗೆ ವ್ಯವಸ್ಥೆ ಮಾಡುತ್ತಿದ್ದಾರೆ. ಭ್ರಷ್ಟಾಚಾರದ ಹಾದಿ ಬಂದ್‌ ಆಗಬೇಕೇ ಅಥವಾ ಭಾರತ್‌ ಬಂದ್‌ ಆಗಬೇಕೇ' ಎಂದು ಸಭಿಕರನ್ನು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ