ಮೋದಿ ವಿರುದ್ಧ ಸಿಡಿದೆದ್ದ ಸಹೋದರ: ಪ್ರತಿಭಟನೆಯ ನೇತೃತ್ವ!

Published : Dec 05, 2018, 03:14 PM ISTUpdated : Dec 05, 2018, 03:23 PM IST
ಮೋದಿ ವಿರುದ್ಧ ಸಿಡಿದೆದ್ದ ಸಹೋದರ: ಪ್ರತಿಭಟನೆಯ ನೇತೃತ್ವ!

ಸಾರಾಂಶ

ಪ್ರಧಾನಿ ಮೋದಿ ವಿರುದ್ಧ ಸಹೋದರ ಪ್ರಹ್ಲಾದ್ ಮೋದಿ ಪ್ರತಿಭಟನೆ! ಪ್ರಧಾನಿ ನಿರ್ಣಯಕ್ಕೆ ಸಹೋದರ ಪ್ರಹ್ಲಾದ್ ಮೋದಿ ಅಪಸ್ವರ! ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಂಬಂಧಪಟ್ಟ ನೇರ ಲಾಭ ವರ್ಗಾವಣೆ ಯೋಜನೆ! ನೇರ ಲಾಭ ವರ್ಗಾವಣೆ ಯೋಜನೆ ಮರುಪರಿಶೀಲನೆಗೆ ಪ್ರಹ್ಲಾದ್ ಮೋದಿ ಆಗ್ರಹ! ಪ್ರತಿಭಟನೆ ಲಾಭ ಪಡೆಯಲೆತ್ನಿಸಿದ ಕಾಂಗ್ರೆಸ್ ವಿರುದ್ಧವೂ ಹರಿಹಾಯ್ದ ಪ್ರಧಾನಿ ಸಹೋದರ! ಅಖಿಲ ಭಾರತೀಯ ನ್ಯಾಯಬೆಲೆ ಅಂಗಡಿ ಡೀಲರ್ಸ್ ಒಕ್ಕೂಟದ ಉಪಾಧ್ಯಕ್ಷ ಪ್ರಹ್ಲಾದ್ ಮೋದಿ

ಔರಂಗಬಾದ್(ಡಿ.05): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರ ಸಹೋದರ ಪ್ರಹ್ಲಾದ್ ಮೋದಿಯೇ ಪ್ರತಿಭಟನೆ ನಡೆಸಿದ ಅಪರೂಪದ ಪ್ರಸಂಗ ನಡೆದಿದೆ. ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಯೋಜನೆಯೊಂದನ್ನು ಮರುಪರಿಶೀಲನೆ ಮಾಡಬೇಕೆಂದು ಆಗ್ರಹಿಸಿ ಪ್ರಹ್ಲಾದ್ ಮೋದಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.  

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಂಬಂಧಪಟ್ಟ ನೇರ ಲಾಭ ವರ್ಗಾವಣೆ  ಯೋಜನೆಯನ್ನು ಮರುಪರಿಶೀಲನೆ ಮಾಡಬೇಕೆಂದು ಪ್ರಹ್ಲಾದ್ ಮೋದಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೇರ ಲಾಭ ವರ್ಗಾವಣೆ ಯೋಜನೆಯಿಂದಾಗಿ ರೇಷನ್ ಅಂಗಡಿ ಮಾಲಿಕರಿಗೆ ದ್ರೋಹವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. 

ಇದೇ ವೇಳೆ ತಮ್ಮ ಪ್ರತಿಭಟನೆಯ ವಿಷಯವನ್ನೇ ಲಾಭವಾಗಿ  ಬಳಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧವೂ ಪ್ರಹ್ಲಾದ್ ಮೋದಿ ಹರಿಹಾಯ್ದಿದ್ದು, ನರೇಂದ್ರ ಮೋದಿ ಸರ್ಕಾರ ನೋಟು ನಿಷೇಧ ಜಿಎಸ್ ಟಿ ಜಾರಿಗೆ ತಂದಿದ್ದು ಕೆಲವರಿಗೆ ನೋವು ಉಂಟುಮಾಡಿರಬಹುದು ಆದರೆ ನ್ಯಾಯಯುತವಾಗಿ ಉದ್ಯಮ ಮಾಡುವವರಿಗೆ ಇದರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂದಿದ್ದಾರೆ. 

ಅಖಿಲ ಭಾರತೀಯ ನ್ಯಾಯಬೆಲೆ ಅಂಗಡಿ ಡೀಲರ್ಸ್ ಒಕ್ಕೂಟದ ಉಪಾಧ್ಯಕ್ಷರಾಗಿರುವ ಪ್ರಹ್ಲಾದ್ ಮೋದಿ, ಔರಂಗಾಬಾದ್ ಜಿಲ್ಲಾ ನ್ಯಾಯ ಬೆಲೆ ಅಂಗಡಿ ಪೂರೈಕೆದಾರರ ಒಕ್ಕೂಟ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ನೇರ ಲಾಭ ವರ್ಗಾವಣೆ ಯೋಜನೆಯನ್ನು ಮರುಪರಿಶೀಲನೆ ಮಾಡಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೂ ಆಗ್ರಹಿಸಿದ್ದು, ಜನತೆ ಹಾಗೂ ಅಂಗಡಿ ಮಾಲಿಕರು ಇಬ್ಬರಿಗೂ ಸಮಸ್ಯೆಯಾಗದಂತೆ ನಿರ್ಧಾರ ಕೈಗೊಳ್ಳಬೇಕೆಂದು ಪ್ರಹ್ಲಾದ್ ಮೋದಿ ಒತ್ತಾಯಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿಮ್ಮ ಹೊಸ ಮನೆಗೆ ಪೇಂಟ್ ಮಾಡುವಾಗ ಈ 7 ತಪ್ಪು ಮಾಡಬೇಡಿ!
ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!